Advertisement

Bidar: ವಿಮಾನಯಾನ ಸೇವೆ ಕುರಿತಂತೆ ಈಶ್ವರ ಖಂಡ್ರೆ ಸಭೆ

02:48 PM Oct 08, 2024 | Team Udayavani |

ಬೀದರ್: ಸ್ಧಗಿತಗೊಂಡಿರುವ ಬೀದರ್ ನಾಗರಿಕ ವಿಮಾನಯಾನ ಸೇವೆಯನ್ನು ಪುನಾರಂಭಿಸುವ ಕುರಿತಂತೆ ಜಿಲ್ಲಾ ಉಸ್ತುವಾರಿ ಮಂತ್ರಿ ಈಶ್ವರ ಖಂಡ್ರೆ ಅವರು ಅ.8ರ ಮಂಗಳವಾರ ಸಭೆ ನಡೆಸಿದರು.

Advertisement

ವಿಕಾಸಸೌಧದ ಕೊಠಡಿ ಸಂಖ್ಯೆ 36ರಲ್ಲಿ ನಡೆದ ಸಭೆಯಲ್ಲಿ ವಿಮಾನ ಯಾನ ಸೇವೆ ಒದಗಿಸುವ ಖಾಸಗಿ ಸಂಸ್ಥೆಯ ಅಧಿಕಾರಿಗಳು ಹಾಗೂ ಕರ್ನಾಟಕ ರಾಜ್ಯ ಕೈಗಾರಿಕೆ ಮತ್ತು ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಉನ್ನತಾಧಿಕಾರಿಗಳು ಭಾಗಿಯಾಗಿದ್ದರು.

ಉಡಾನ್ ಯೋಜನೆಯಡಿ ನೀಡಲಾಗುತ್ತಿದ್ದ ಅನುದಾನ ನಿಲ್ಲಿಸಿರುವ ಕಾರಣ ಖಾಸಗಿ ವಿಮಾನಯಾನ ಸೇವೆ ಒದಗಿಸುವ ಸಂಸ್ಥೆಗಳು ಬೀದರ್ ನಾಗರಿಕ ವಿಮಾನಯಾನ ಸೇವೆಯನ್ನು ಸ್ಥಗಿತಗೊಳಿಸಿದ್ದು, ಸೇವೆಯ ಪುನಾರಂಭದ ಸಾಧ್ಯಾಸಾಧ್ಯತೆಗಳ ಬಗ್ಗೆ ಚರ್ಚಿಸಲಾಯಿತು.

ಮುಂದಿನ ಸಚಿವ ಸಂಪುಟದ ಸಭೆಯ ಮುಂದೆ ಈ ಪ್ರಸ್ತಾವನೆ ಮಂಡಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next