Advertisement

Bidar; ಮಳೆ ಹಾನಿ ಪ್ರದೇಶಗಳಿಗೆ ಸಚಿವ ಈಶ್ವರ ಖಂಡ್ರೆ ಭೇಟಿ

12:24 PM Jul 29, 2024 | Team Udayavani |

ಬೀದರ್: ಮಳೆಯಿಂದ‌ ಹಾನಿಯಾದ ತಾಲೂಕಿನ ವಿವಿಧ ಪ್ರದೇಶಗಳಿಗೆ‌ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Advertisement

ತಾಲೂಕಿನ ಕಾಡವಾದ, ಖಾಶೆಂಪುರ (ಪಾನ್) ಮತ್ತು ಕಾಡವಾದ ಗ್ರಾಮಕ್ಕೆ ಭೇಟಿ ನೀಡಿದರು. ಒಂದು‌ ವಾರ ನಿರಂತರ ಮಳೆಯಿಂದ ಶಿಥಲಗೊಂಡು ಭಾಗಶ: ಕುಸಿದಿರುವ ಮನೆಗಳನ್ನು ಪರಿಶೀಲಿಸಿದರು.

ಜಿಲ್ಲೆಯಲ್ಲಿ ಹಾನಿಯಾಗಿರುವ ಮನೆಗಳ ಕುರಿತು ಸರ್ವೇ ನಡೆಸಿ ಹಾನಿಯಾದ ಮನೆಗಳಿಗೆ ತ್ವರಿತವಾಗಿ ಪರಿಹಾರ ವಿತರಿಸಲು ಕ್ರಮ ವಹಿಸಬೇಕು ಎಂದು ಸ್ಥಳದಲ್ಲಿದ್ದ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರಿಗೆ ಸೂಚಿಸಿದರು.

ನಂತರ ಮಳೆಯಿಂದ ಕೆಲವೆಡೆ ಜಮೀನುಗಳಿಗೆ ನೀರು‌ ನುಗ್ಗಿ‌ ಹಾನಿಯಾಗಿರುವುದನ್ನು ಪರಿಶೀಲಿಸಿದ ಸಚಿವರು, ಬೆಳೆ ಹಾನಿಯ ಬಗ್ಗೆ ಕೃಷಿ ಮತ್ತು ಕಂದಾಯ ಇಲಾಖೆಯ ಜಂಟಿ ಸಮೀಕ್ಷೆ ನಡೆಸಿ ವರದಿ ಸಲ್ಲಿಸುವಂತೆ ತಿಳಿಸಿದರು.

ಪೌರಾಡಳಿತ ಸಚಿವ ರಹೀಮ್ ಖಾನ್, ಜಿ.ಪಂ ಸಿಇಒ ಡಾ.‌ದಿಲೀಪ ಬಡೋದಿ ಮತ್ತು ಎಸ್.ಪಿ ಸೇರಿದಂತೆ ಮತ್ತಿತರರು ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next