Advertisement

ರೋಗಿಗಳ ಆರೋಗ್ಯ ವಿಚಾರಣೆ

01:22 PM Mar 06, 2020 | Naveen |

ಬೀದರ: ಜಿಪಂ ಅಧ್ಯಕ್ಷೆ ಗೀತಾ ಪಂಡಿತರಾವ್‌ ಚಿದ್ರಿ ಅವರು ಗುರುವಾರ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ, ಕೊರೊನಾ ಸೋಂಕಿತ ರೋಗಿಗಳ ಆರೋಗ್ಯದ ಬಗ್ಗೆ ವಿಚಾರಿಸಿದರು.

Advertisement

ಶಂಕಿತ ವೈರಸ್‌ ಸೋಂಕಿತರೆಂದು ದಾಖಲಾದ ರೋಗಿಗಳಿಗೆ ನೀಡುತ್ತಿರುವ ಚಿಕಿತ್ಸೆಯ ಬಗ್ಗೆ ಸ್ಥಳದಲ್ಲಿದ್ದ ವೈದ್ಯಾಧಿಕಾರಿಗಳಿಂದ ಮಾಹಿತಿ ಪಡೆದರು. ಈಗ ಆಸ್ಪತ್ರೆಯಲ್ಲಿ ದಾಖಲಾದ ರೋಗಿಗಳಿಗೆ ಕೊರೊನಾ ವೈರಸ್‌ ಇರುವ ಬಗ್ಗೆ ದೃಢಪಟ್ಟಿಲ್ಲ. ಅವರು ಆರೋಗ್ಯವಾಗಿದ್ದಾರೆ. ಚಿಕಿತ್ಸೆ ನೀಡುತ್ತಿರುವ ವೈದ್ಯರೊಂದಿಗೆ ಮಾತನಾಡಿದ್ದು, ಪುಣೆಗೆ ಕಫ ಮತ್ತು ರಕ್ತದ ಮಾದರಿಯನ್ನು ಕಳಿಸಿದ್ದಾಗಿ ವೈದ್ಯಾಧಿಕಾರಿಗಳು ಹೇಳಿದ್ದಾರೆ.

ಹೀಗಾಗಿ ಜಿಲ್ಲೆಯ ಸಾರ್ವಜನಿಕರು ಭೀತಿಗೊಳಗಾಗಬಾರದು ಎಂದು ಅಧ್ಯಕ್ಷರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ತೀವ್ರ ಜ್ವರ, ತಲೆನೋವು, ನೆಗಡಿ, ಕೆಮ್ಮು, ಉಸಿರಾಟದ ತೊಂದರೆ, ನ್ಯೂಮೋನಿಯಾ, ಬೇ ಧಿಯಂತಹ ರೋಗ ಲಕ್ಷಣಗಳು ಕಾಣಿಸಿದಲ್ಲಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ಈ ರೋಗವು ಸೋಂಕಿತ ವ್ಯಕ್ತಿಯು ಸೀನಿದಾಗ ಮತ್ತು ಕೆಮ್ಮಿದಾಗ, ಸೋಂಕಿತ ವ್ಯಕ್ತಿಯ ಜೊತೆ ನಿಕಟ ಸಂಪರ್ಕದಲ್ಲಿರುವಾಗ, ಸೋಂಕಿತ ವ್ಯಕ್ತಿಯ ಹಸ್ತ ಲಾಘವ ಮತ್ತು ಮುಟ್ಟುವಾಗ, ಸೋಂಕಿತ ವ್ಯಕ್ತಿಯು ಬಳಸಿದ ವಸ್ತುಗಳನ್ನು ಯಾವುದೇ ರಕ್ಷಣೆ ಇಲ್ಲದೆ ಬಳಸಿದಾಗ, ಸ್ವಚ್ಛಗೊಳಿಸದ ಅಥವಾ ಸುರಕ್ಷಿತವಲ್ಲದ ಕೈಗಳಿಂದ ಕಣ್ಣು, ಮೂಗು, ಬಾಯಿಯನ್ನು ಮುಟ್ಟುವುದರಿಂದ ಹರಡುತ್ತದೆ. ಹಾಗಾಗಿ ಸಾರ್ವಜನಿಕರು ಭಯಭೀತರಾಗದೇ ಮುನ್ನೆಚ್ಚರಿಕೆ ವಹಿಸಬೇಕು ಎಂದು ಇದೆ ವೇಳೆ ಅಧ್ಯಕ್ಷೆ ಚಿದ್ರಿ ಅವರು ಸಲಹೆ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next