Advertisement

Bidar; ಬಿಜೆಪಿ – ಜೆಡಿಎಸ್‌ ವಿರುದ್ದ ಬೀದರ್‌ ನಲ್ಲಿ ಪ್ರತಿಭಟನೆ

03:15 PM Sep 26, 2024 | Team Udayavani |

ಬೀದರ್:‌ ಮೈಸೂರು ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್‌ ಒಳಸಂಚು ನಡೆಸುತ್ತಿದೆ ಎಂದು ಆರೋಪಿಸಿ ನಗರದಲ್ಲಿ ಗುರುವಾರ‌ ಜಿಲ್ಲಾ ಶೋಷಿತ ಸಮುದಾಯಗಳ ಮಹಾ ಒಕ್ಕೂಟದಿಂದ ಪ್ರತಿಭಟನೆ ನಡೆಸಲಾಯಿತು.

Advertisement

ನಗರದ ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ಪ್ರಮುಖರು ಕೈಗೆ ಕಪ್ಪು ಪಟ್ಟಿ ಧರಿಸಿ, ಬಿಜೆಪಿ ಮತ್ತು ಜೆಡಿಎಸ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸಿದ್ಧರಾಮಯ್ಯ ಅವರನ್ನು ರಾಜಕೀಯವಾಗಿ ಮುಗಿಸಲು ಮತ್ತು ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಷಡ್ಯಂತ್ರ ನಡೆಸಲಾಗುತ್ತಿದೆ ಎಂದು ಕಿಡಿಕಾರಿದರು.

ಈ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಅಮೃತರಾವ ಚಿಮಕೋಡ, ನಗರ ಸಭೆ ಅಧ್ಯಕ್ಷ ಮೊಹ್ಮದ ಗೌಸ್, ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಶಾಂತ ದೊಡ್ಡಿ, ಧನರಾಜ ಹಂಗರಗಿ, ಅನೀಲಕುಮಾರ ಬೆಲ್ದಾರ್, ಶಂಕರ ದೊಡ್ಡಿ, ರಮೇಶ ಡಾಕುಳಗಿ, ಪರ್ವೇಜ್ ಕಮಲ್, ಚಂದ್ರಕಾಂತ ಹಿಪ್ಪಳಗಾಂವ, ಕರೀಮ ಸಾಬ್, ಎಂ.ಎ ಸಮಿ, ಮೊಹ್ಮದ ರಿಯಾಜ್, ರವೀಂದ್ರ, ರಾಕೇಶ, ಇರ್ಶಾದ್ ಪೈಲ್ವಾನ್, ಅಮರ ಸಾಗರ, ನರಸಪ್ಪಾ ಯಾಕತಪೂರ, ತುಕಾರಾಮ, ಪೂಜಾ ಜಾರ್ಜ, ಸಂಗೀತಾ ಕಾರಬರಿ, ತೆಜಮ್ಮಾ, ಲಕ್ಷ್ಮೀ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next