Advertisement

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

04:28 PM Apr 22, 2024 | Team Udayavani |

ಬೀದರ್: ಪ್ರೀತಿ ಮಾಡಿದ ಯುವಕ ಪ್ರೇಯಸಿಯ ಮದುವೆ ದಿನವೇ ಶವವಾಗಿ ಪತ್ತೆಯಾಗಿರುವ ಘಟನೆ ನಗರ ಹೊರವಲಯದ ನೌಬಾದ್ ಸಮೀಪದ ರೈಲ್ವೆ ಹಳಿ ಬಳಿ ನಡೆದಿದೆ.

Advertisement

ತಾಲೂಕಿನ ನಿಜಾಂಪುರ ಗ್ರಾಮದ ವೆಂಕಟೇಶ ಕುಮಾರ್ (22) ಮೃತ ಯುವಕ. ರೈಲ್ವೆ ಹಳಿ ಮೇಲೆ ವೆಂಕಟೇಶ ಕುಮಾರ್ ತುಂಡರಿಸಿದ್ದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕ ಕಳೆದ ಮೂರು ವರ್ಷಗಳಿಂದ ಅದೇ ಗ್ರಾಮದ ಯುವತಿಯನ್ನು ಪ್ರೀತಿಸುತ್ತಿದ್ದ. ಆದರೆ, ಯುವತಿ ಮದುವೆ ದಿನವೇ ಈಗ ಆತನ ಶವ ಪತ್ತೆಯಾಗಿದೆ.

ರೈಲ್ವೆ ಹಳಿ ಮೇಲೆ ತುಂಡರಿಸಿ ಬಿದ್ದಿದ್ದ ಶವದಿಂದ ಒಂದು ಕಿಮೀ ದೂರದಲ್ಲಿ ವೆಂಕಟೇಶ್ ಬೈಕ್ ಕೂಡ ಪತ್ತೆಯಾಗಿದೆ. ಇದು ಆತ್ಮಹತ್ಯೆಯಲ್ಲ. ಕೊಲೆ ಎಂದು ಮೃತ ಯುವಕನ ಕುಟುಂಬಸ್ಥರು ಆರೋಪ ಮಾಡುತ್ತಿದ್ದಾರೆ.

ಘಟನಾ ಸ್ಥಳದಲ್ಲಿ ವೆಂಕಟೇಶ್ ಸಂಬಂಧಿಕರು ಆಕ್ರಂದನ ಮುಗಿಲು ಮುಟ್ಟಿದೆ. ನ್ಯೂಟೌನ್ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next