Advertisement

Bidar; ಮದುವೆಯಾದ ಎರಡೇ ದಿನಕ್ಕೆ ಯುವಕ ರಸ್ತೆ ಅಪಘಾತದಲ್ಲಿ ಮೃತ್ಯು

06:07 PM Jul 02, 2023 | Team Udayavani |

ಬೀದರ್ : ನಗರದ ಹೊರವಲಯದ ಕೋಳಾರ ಕೈಗಾರಿಕಾ ಪ್ರದೇಶದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಎರಡೇ ದಿನದ ಹಿಂದೆಯಷ್ಟೇ ಮದುವೆಯಾಗಿದ್ದ ಯುವಕ ಮೃತಪಟ್ಟಿರುವ ಹೃದಯವಿದ್ರಾಹಕ ಘಟನೆ ರವಿವಾರ ಮಧ್ಯಾಹ್ನ ನಡೆದಿದೆ.

Advertisement

ಕಮಲನಗರ ತಾಲೂಕಿನ ಬಳತ್ (ಬಿ) ಗ್ರಾಮದ ಅರುಣ ಕಾಶಿನಾಥ ಪಡಸಾಲೆ (33) ಮೃತಪಟ್ಟ ಯುವಕ. ಕಳೆದ ಜೂ. ೨೯ರಂದು ಮದುವೆಯಾಗಿದ್ದ ಅರುಣ, ತನ್ನ ಪತ್ನಿ ಗ್ರಾಮ ಹುಮನಾಬಾದ ತಾಲೂಕಿನ ಮುಗನೂರ್‌ನಿಂದ ನೌಬಾದ್‌ಗೆ ಬೈಕ್ ಮೇಲೆ ವಾಪಸ್ ಬರುವಾಗ ಸರ್ಕಾರಿ ಬಸ್‌ಗೆ ಡಿಕ್ಕಿ ಆಗಿದೆ. ತೀವ್ರ ರಕ್ತಸ್ರಾವ ಹಿನ್ನಲೆ ಅರುಣ ಸ್ಥಳದಲ್ಲೇ ಮೃಪಟ್ಟಿದ್ದಾನೆ.

ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದ ಅರುಣ ಪಡಸಾಲೆ, ನೌಬಾದ್‌ನ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ. ಈಗ ಮದುವೆಯಾದ ಎರಡು ದಿನದಲ್ಲೇ ದುರಂತ ಸಂಭವಿಸಿರುವುದು ಎರಡು ಕುಟುಂಬಗಳಿಗೆ ಆಘಾತವನ್ನುಂಟು ಮಾಡಿದೆ. ಸ್ಥಳಕ್ಕೆ ನೂತನ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next