Advertisement

ಕ್ವಾರಂಟೈನ್‌ ಕೇಂದ್ರಗಳಲ್ಲಿ ಸೌಲಭ್ಯ ಕೊರತೆ ಆಗದಿರಲಿ

03:51 PM Jul 01, 2020 | Naveen |

ಬೀದರ: ಜಿಲ್ಲೆಯ ವಿವಿಧೆಡೆ ಇರುವ ಸಾಂಸ್ಥಿಕ ಕ್ವಾರಂಟೈನ್‌ ಕೇಂದ್ರಗಳಲ್ಲಿ ಸ್ವಚ್ಛತೆ, ಶುದ್ಧತೆ ಕಾಪಾಡುವ ಜೊತೆಗೆ ಸೌಲಭ್ಯಗಳ ಕೊರತೆ ದೂರು ಬರದಂತೆ 2 ದಿನಗಳಲ್ಲಿ ಕ್ರಮ ವಹಿಸಲು ಜಿಲ್ಲಾಧಿಕಾರಿ ರಾಮಚಂದ್ರನ್‌ ಆರ್‌. ಸಹಾಯಕ ಆಯುಕ್ತರಿಗೆ ಸೂಚಿಸಿದರು.

Advertisement

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಜತೆ ವಿಡಿಯೋ ಸಂವಾದ ನಡೆಸಿ ಅವರು ಮಾತನಾಡಿದರು. ಸಾಂಸ್ಥಿಕ ಕ್ವಾರಂಟೈನ್‌ ಕೇಂದ್ರಗಳಲ್ಲಿ ಕುಡಿಯುವ ನೀರಿಲ್ಲ, ಶೌಚಾಲಯದ ವ್ಯವಸ್ಥೆ ಸರಿಯಿಲ್ಲ ಎಂದು ಅಲ್ಲಿನ ಜನರಿಂದ ದೂರುಗಳು ಬರದ ಹಾಗೆ ಸುವ್ಯವಸ್ಥಿತವಾಗಿರುವಂತೆ ನೋಡಿಕೊಳ್ಳಬೇಕು. ಕ್ವಾರಂಟೈನ್‌ ನಿಯಮಗಳ ಪಾಲನೆಗೆ ಸ್ಥಳೀಯರ ಸಹಕಾರ ಪಡೆಯಬೇಕು. ಸಾಂಸ್ಥಿಕ ಹಾಗೂ ಹೋಮ್‌ ಕ್ವಾರಂಟೈನ್‌ ನಿಯಮ ಉಲ್ಲಂಘಿಸುವವರ ಮೇಲೆ ಎಫ್‌ಐಆರ್‌ ದಾಖಲಿಸಿ ಕ್ರಮ ವಹಿಸಬೇಕು. ಜಿಲ್ಲೆಯಲ್ಲಿನ ಫೀವರ್‌ ಕ್ಲಿನಿಕ್‌ಗಳು ಕೂಡ ಸರಿಯಾಗಿರಬೇಕು ಎಂದು ನಿರ್ದೇಶನ ನೀಡಿದರು.

ಕೋವಿಡ್‌‌-19 ಸೋಂಕಿತರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರನ್ನು ಪತ್ತೆ ಹಚ್ಚುವ ಕಾರ್ಯ ಮತ್ತು ಐಎಲ್‌ಐ ಮತ್ತು ಸಾರಿ ಪ್ರಕರಣಗಳನ್ನು ಪಟ್ಟಿ ಮಾಡಿ ಅವರ ಗಂಟಲು ದ್ರವದ ಮಾದರಿ ಪರೀಕ್ಷೆ ತೀವ್ರಗತಿಯಲ್ಲಿ ನಡೆಸುವಂತೆ ನೋಡಿಕೊಳ್ಳಬೇಕು ಜಿಲ್ಲಾಧಿಕಾರಿ ಸೂಚಿಸಿದರು. ಜಿಪಂ ಸಿಇಓ ಗ್ಯಾನೇಂದ್ರಕುಮಾರ ಗಂಗವಾರ, ಅಪರ ಜಿಲ್ಲಾಧಿಕಾರಿ ರುದ್ರೇಶ ಗಾಳಿ, ಎಎಸ್‌ಪಿ ಡಾ| ಗೋಪಾಲ ಬ್ಯಾಕೋಡ್‌, ಸಹಾಯಕ ಆಯುಕ್ತ ಅಕ್ಷಯ ಶ್ರೀಧರ, ಭಂವರಸಿಂಗ್‌ ಮೀನಾ ಹಾಗೂ ವೈದ್ಯಾಧಿಕಾರಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next