Advertisement

Bidar;ಮದುವೆಗೆ ಒಪ್ಪದ ಪೋಷಕರು: ನೇಣಿಗೆ ಶರಣಾದ ಯುವ ಪ್ರೇಮಿಗಳು

07:56 PM Dec 23, 2023 | Team Udayavani |

ಬೀದರ್: ಯುವ ಪ್ರೇಮಿಗಳಿಬ್ಬರು ನೇಣಿಗೆ ಶರಣಾದ ದಾರುಣ ಘಟನೆ ಶನಿವಾರ ತಾಲೂಕಿನ ಸಿರ್ಸಿ(ಎ) ಗ್ರಾಮದಲ್ಲಿ ನಡೆದಿದೆ.

Advertisement

ಗ್ರಾಮದ ಧನರಾಜ್ ರಾಮಣ್ಣ (25)ಹಾಗೂ ಭಾಗ್ಯಶ್ರೀ ವೈಜಿನಾಥ (19) ಅತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು. ಗ್ರಾಮದ ಹೊರವಲಯದಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾತ್ರಿ ಸಮಯದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಶನಿವಾರ ಬೆಳಗ್ಗೆ ಬೆಳಕಿಗೆ ಬಂದಿದೆ.

ಇಬ್ಬರೂ ಪ್ರೇಮಿಗಳು ಬೇರೆ-ಬೇರೆ ಸಮುದಾಯಕ್ಕೆ ಸೇರಿದವರಾಗಿದ್ದು, ಮದುವೆಗೆ ಪೋಷಕರು ಒಪ್ಪದ ಹಿನ್ನೆಲೆ ಆತ್ಮಹತ್ಯೆಗೆ ಶರಣಾಗಿರುವ ಸಾಧ್ಯತೆ ಇದೆ ಎಂದು ಅನುಮಾನಿಸಲಾಗಿದೆ. ಘಟನೆ ಕುರಿತು ಬಗದಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next