Advertisement

ವಿಧಾನಪರಿಷತ್ ನಾಲ್ಕು ಕ್ಷೇತ್ರಗಳ ಚುನಾವಣೆ ದಿನಾಂಕ ಘೋಷಣೆ

04:13 PM May 12, 2022 | Team Udayavani |

ಬೆಂಗಳೂರು : ವಿಧಾನಪರಿಷತ್ ನ ಎರಡು ಶಿಕ್ಷಕರ ಹಾಗೂ ಎರಡು ಪದವೀಧರ ಕ್ಷೇತ್ರಗಳ ಚುನಾವಣೆ ಘೋಷಣೆಯಾಗಿದ್ದು, ಜೂನ್ 13 ರಂದು ಚುನಾವಣೆ ನಡೆಯಲಿದೆ ಎಂದು ಕರ್ನಾಟಕ ಮುಖ್ಯ ಚುನಾವಣಾ ಅಧಿಕಾರಿ ಗುರುವಾರ ತಿಳಿಸಿದ್ದಾರೆ. ಬೆಳಗ್ಗೆ 8 ರಿಂದ ಸಂಜೆ 4ರ ವರೆಗೆ ಮತದಾನ ನಡೆಯಲಿದೆ.

Advertisement

ಜೂನ್ 4 ಕ್ಕೆ ದಕ್ಷಿಣ ಮತ್ತು ವಾಯುವ್ಯ ಪದವೀಧರರ ಕ್ಷೇತ್ರದಲ್ಲಿ ಹನುಮಂತ ನಿರಾಣಿ ಮತ್ತು ಕೆ.ಟಿ.ಶ್ರೀಕಂಠೇ ಗೌಡ, ವಾಯುವ್ಯ ಮತ್ತು ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಅರುಣ್ ಶಹಾಪುರ ಮತ್ತು ಬಸವರಾಜ್ ಹೊರಟ್ಟಿ ಅವರಿಂದ ತೆರವಾಗುವ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

26 ಮೇ ನಾಮ ಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಜೂನ್ 15 ರಂದು ಫಲಿತಾಂಶ ಹೊರ ಬೀಳಲಿದೆ.

Advertisement

Udayavani is now on Telegram. Click here to join our channel and stay updated with the latest news.

Next