Advertisement

ವಿಮಾನ ನಿಲ್ದಾಣ ರನ್ ವೇಯಲ್ಲಿ ಟ್ರ್ಯಾಕ್ಟರ್ ನಿಂತಿಲ್ಲ: ವಿವಿ ರಾವ್

03:46 PM Jan 11, 2018 | Team Udayavani |

ಮಂಗಳೂರು: ವಿಮಾನ ನಿಲ್ದಾಣದ ರನ್ ವೇಯಲ್ಲಿ ಟ್ರ್ಯಾಕ್ಟರ್ ನಿಂತಿಲ್ಲ, ಇದು ಸತ್ಯಕ್ಕೆ ದೂರವಾದ ವಿಷಯ ಎಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ದೇಶಕ ವಿವಿ ರಾವ್ ನೀಡಿರುವ ಪತ್ರಿಕಾ ಹೇಳಿಕೆಯಲ್ಲಿ ಸ್ಪಷ್ಟನೆ ನೀಡಿದ್ದಾರೆ.

Advertisement

ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೂದಲೆಳೆಯ ಅಂತರದಲ್ಲಿ ಭಾರೀ ಅನಾಹುತವೊಂದು ತಪ್ಪಿದ ಘಟನೆ ನಡೆದಿದೆ ಎಂದು ಎಎನ್ಐ ವರದಿ ಮಾಡಿತ್ತು.

ರನ್ ವೇ ಸಮೀಪವೇ ಟ್ರ್ಯಾಕ್ಟರ್ ವೊಂದು ನಿಲ್ಲಿಸಲಾಗಿತ್ತು, ಆಗ ಮುಂಬೈಯತ್ತ ಸಾಗಬೇಕಾಗಿದ್ದ ವಿಮಾನವೊಂದು ಟೇಕಾಫ್ ಆಗುತ್ತಿತ್ತು. ಇದು ಏರ್ ಟ್ರಾಫಿಕ್ ಕಂಟ್ರೋಲರ್ ಗಮನಕ್ಕೆ ಬಂದಿತ್ತು, ಎಟಿಎಸ್ ಸಿಬ್ಬಂದಿ ಕೂಡಲೇ ವಿಮಾನದ ಪೈಲಟ್ ಗೆ ಸಂದೇಶ ರವಾನಿಸಿದ್ದಾರೆ. ಇದರಿಂದಾಗಿ ಭಾರೀ ಅನಾಹುತ ತಪ್ಪಿದಂತಾಗಿದೆ ಎಂದು ವರದಿ ವಿವರಿಸಿತ್ತು.

ಆದರೆ ಈ ಬಗ್ಗೆ ಸ್ಪಷ್ಟನೆ ನೀಡಿರುವ ನಿರ್ದೇಶಕರು, ವಿಮಾನ ಟೇಕಾಫ್ ಆಗುವ ವೇಳೆ ರನ್ ವೇ ಯಲ್ಲಿ ಯಾವುದೇ ಟ್ರ್ಯಾಕ್ಟರ್ ಆಗಲಿ ವಸ್ತುವಾಗಲಿ ಇರಲಿಲ್ಲವಾಗಿತ್ತು. ವಿಮಾನ ಟೇಕ್ ಆಫ್ ಆಗುವ ಮುನ್ನವೇ ರನ್ ವೇ ಗಿಂತ ತುಂಬಾ ದೂರದಲ್ಲಿ ಟ್ರ್ಯಾಕ್ಟರ್ ಇದ್ದಿರುವುದನ್ನು ಏರ್ ಟ್ರಾಫಿಕ್ ಕಂಟ್ರೋಲರ್ ಗಮನಕ್ಕೆ ಬಂದಿತ್ತು, ಕೂಡಲೇ ಟ್ರ್ಯಾಕ್ಟರ್ ಅನ್ನು ತೆಗೆಯಿಸಿದ ಬಳಿಕ ವಿಮಾನ ಸುರಕ್ಷಿತವಾಗಿ ಟೇಕಾಫ್ ಆಗಿದೆ ಎಂದು ಮಾಧ್ಯಮಗಳಿಗೆ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ಸ್ಪಷ್ಟನೆ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next