Advertisement

ನಟ ಉಪೇಂದ್ರಗೆ ಬಿಗ್ ರಿಲೀಫ್; ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ವಜಾ

03:56 PM Jul 31, 2017 | Sharanya Alva |

ಬೆಂಗಳೂರು: ಸ್ಯಾಂಡಲ್ ವುಡ್ ರಿಯಲ್ ಸ್ಟಾರ್, ನಿರ್ದೇಶಕ ಉಪೇಂದ್ರ ವಿರುದ್ಧ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ಸೋಮವಾರ ವಜಾಗೊಳಿಸಿದ್ದು, ಇದರಿಂದಾಗಿ ಉಪೇಂದ್ರಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

Advertisement

ಏನಿದು ಪ್ರಕರಣ?
ನಟ ಉಪೇíದ್ರ ಅವರು 2005ರಲ್ಲಿ ತಾವರೆಕೆರೆಯ ಬ್ಯಾಲಾಳುವಿನಲ್ಲಿ 17 ಎಕರೆ 10 ಗುಂಟೆ ಜಮೀನು ಖರೀದಿಸಿದ್ದರು. ವ್ಯವಸಾಯದ ಜಮೀನು ಖರೀದಿಸಿದ್ದರಿಂದ ಉಪೇಂದ್ರ ಅವರು ಭೂಕಂದಾಯ ಕಾಯ್ದೆ 79ಎ, ಬಿ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಉಪವಿಭಾಗಾಧಿಕಾರಿ ಅವರು ಜಮೀನನ್ನು ವಶಪಡಿಸಿಕೊಂಡಿದ್ದರು.

ಈ ಪ್ರಕರಣ ಕೋರ್ಟ್ ಮೆಟ್ಟಿಲೇರಿದ್ದಾಗ ಹೈಕೋರ್ಟ್ ಉಪವಿಭಾಗಾಧಿಕಾರಿ ಆದೇಶವನ್ನು ರದ್ದುಪಡಿಸಿತ್ತು. ಬಳಿಕ ರಾಜ್ಯ ಸರ್ಕಾರ ಇದನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿತ್ತು.

Advertisement

Udayavani is now on Telegram. Click here to join our channel and stay updated with the latest news.

Next