Advertisement

ಸಂಸದ ಡಿ.ಕೆ.ಸುರೇಶ್‌ಗೆ ಬಿಗ್‌ ರಿಲೀಫ್

07:14 AM Jun 27, 2019 | Team Udayavani |

ಬೆಂಗಳೂರು: ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಸಾತನೂರು ಬಳಿಯ ಅರಣ್ಯ ಭೂಮಿ ಒತ್ತುವರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಡಿ.ಕೆ.ಸುರೇಶ್‌ಗೆ ಬಿಗ್‌ ರಿಲೀಫ್ ಸಿಕ್ಕಿದೆ. ಬುಧವಾರ ಪ್ರಕರಣದ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸುರೇಶ್‌ ಅವರನ್ನು ಆರೋಪ ಮುಕ್ತಗೊಳಿಸಿ ಆದೇಶಿಸಿದೆ.

Advertisement

ಕನಕಪುರ ತಾಲೂಕಿನ ಸಾತನೂರಿನ ಅರಣ್ಯಪ್ರದೇಶವನ್ನು ಒತ್ತುವರಿ ಮಾಡಿ ಅಕ್ರಮ ಕಲ್ಲು ಗಣಿಗಾರಿಕೆ ನಡೆಸಿ ಸರ್ಕಾರದ ಬೊಕ್ಕಸಕ್ಕೆ ಅಪಾರ ನಷ್ಟ ಉಂಟು ಮಾಡಿದ್ದಾರೆ ಎಂದು ಆರೋಪಿಸಿ ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ.ಸುರೇಶ್‌ ವಿರುದ್ಧ ಕನಕಪುರ ವಿಭಾಗದ ಅರಣ್ಯಾಧಿಕಾರಿಗಳು ದೂರು ನೀಡಿದ್ದರು. ಈ ಸಂಬಂಧ ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್‌, ಸುರೇಶ್‌ ಅವರನ್ನು ಆರೋಪ ಮುಕ್ತಗೊಳಿಸಿ ಆದೇಶ ಹೊರಡಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next