Advertisement

ದೇಗ್ಲೂರ್‌ ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್‌ ಜಯಭೇರಿ ಬಾರಿಸಲಿದೆ: ಥೋರಟ್‌

04:42 PM Oct 31, 2021 | Team Udayavani |

ಪಂಢರಪುರ: ನಾಂದೇಡ್‌ ಜಿಲ್ಲೆಯ ದೇಗ್ಲೂರ್‌ ವಿಧಾನಸಭಾ ಕ್ಷೇತ್ರದಲ್ಲಿ ನಡೆಯುವ ಉಪಚುನಾವಣೆಯಲ್ಲಿಕಾಂಗ್ರೆಸ್‌ ಜಯಭೇರಿ ಬಾರಿಸಲಿದೆ ಎಂದು ಕಂದಾಯ ಸಚಿವ ಬಾಳಾಸಾಹೇಬ್‌ ಥೋರಟ್‌ ಹೇಳಿದ್ದಾರೆ.

Advertisement

ಶನಿವಾರ ಸಂಗೋಳಕ್ಕೆ ಭೇಟಿ ನೀಡಿದ ಕಂದಾಯಸಚಿವ ಬಾಳಾಸಾಹೇಬ್‌ ಥೋರಟ್‌ ಅವರುಮಾತನಾಡಿ, ಲೋಕೋಪಯೋಗಿ ಸಚಿವ ಅಶೋಕ್‌ ಚವಾಣ್‌ ಈ ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ನಡೆಸಿದ್ದಾರೆ.ಸ್ಥಳೀಯ ಮಟ್ಟದ ರಾಜಕೀಯ ಸಮೀಕರಣಗಳುಹೊಂದಾಣಿಕೆಯಾಗಿರುವುದರಿಂದ ಕಾಂಗ್ರೆಸ್‌ ಪಕ್ಷಖಂಡಿತವಾಗಿ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಟಿ ಕಾರ್ಮಿಕರ ಆಂದೋಲನದ ಕುರಿತು ಮಾತನಾಡಿದ ಥೋರಟ್‌, ಕೆಲವೆಡೆ ರಾಜ್ಯ ಸಾರಿಗೆ ನಿಗಮದ ನೌಕರರ ಆಂದೋಲನ ನಡೆಯುತ್ತಿದೆ.

ಅವರ ಕೆಲವು ಬೇಡಿಕೆಗಳಿಗೆ ಸರಕಾರ ಒಪ್ಪಿಗೆ ನೀಡಿದೆ. ಆದರೆ ಇತರೆ ಸಮಸ್ಯೆಗಳಿದ್ದರೆ ಮುಂಬಯಿಯಲ್ಲಿ ಮಾಹಿತಿ ಪಡೆದು ಚರ್ಚಿಸುತ್ತೇವೆ ಎಂದು ಕಂದಾಯ ಸಚಿವ ಬಾಳಾಸಾಹೇಬ್‌ ಥೋರಟ್‌ ಸ್ಪಷ್ಟಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next