Advertisement
ಇದೀಗ ರಾಜಸ್ಥಾನದಲ್ಲಿ ಯಾರು ಮುಖ್ಯಮಂತ್ರಿಯಾಗಬಹುದು ಎಂಬ ಲೆಕ್ಕಾಚಾರಗಳು ಆರಂಭವಾಗಿದೆ. ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಹಿರಿಯ ನಾಯಕಿ ವಸುಂಧರಾ ರಾಜೆ, ಸಂಸದೆ ದಿಯಾ ಕುಮಾರಿ (ವಿದ್ಯಾಧರ ನಗರ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ) ಮತ್ತು ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಸಿಎಂ ರೇಸ್ ನಲ್ಲಿದ್ದಾರೆ.
Related Articles
Advertisement
ಇದನ್ನೂ ಓದಿ:ABVP ಕಾರ್ಯಕರ್ತನಾಗಿದ್ದ ರೇವಂತ್ ರೆಡ್ಡಿ ಈಗ ತೆಲಂಗಾಣ ಸಿಎಂ ಹುದ್ದೆಯತ್ತ
ರಜಪೂತ ಸಮುದಾಯದಿಂದ ಬಂದ ದಿಯಾ ಕುಮಾರಿ ಅವರನ್ನು ಆರಂಭದಲ್ಲಿ ರಾಜ್ಯ ರಾಜಕೀಯಕ್ಕೆ ಕರೆತಂದ ಕೀರ್ತಿ ವಸುಂಧರಾ ರಾಜೆ ಅವರಿಗೆ ಸಲ್ಲುತ್ತದೆ ಆದರೆ ನಂತರ ವಸುಂಧರಾ ಅವರು ಮುಖ್ಯಮಂತ್ರಿಯಾಗಿದ್ದಾಗ ಅವರಿಬ್ಬರು ಆಸ್ತಿ ವಿವಾದದಲ್ಲಿ ಭಾಗಿಯಾಗಿದ್ದರು.
ಗಜೇಂದ್ರ ಸಿಂಗ್ ಶೇಖಾವತ್: ಸಂಜೀವನಿ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿ ಹಗರಣದಲ್ಲಿ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಸಿಎಂ ಅಶೋಕ್ ಗೆಹ್ಲೋಟ್ ಅವರೊಂದಿಗೆ ಸಾರ್ವಜನಿಕ ಆರೋಪ ಪ್ರತ್ಯಾರೋಪದಲ್ಲಿ ತೊಡಗಿಕೊಂಡಿದ್ದರು. 2020 ರಲ್ಲಿ ಗೆಹ್ಲೋಟ್ ಸರ್ಕಾರವನ್ನು ಉರುಳಿಸುವ ಪ್ರಯತ್ನಕ್ಕೆ ಸಂಬಂಧಿಸಿದಂತೆ ಅವರು ಕಾಲ್ ರೆಕಾರ್ಡಿಂಗ್ ವಿಷಯದಲ್ಲಿ ಸುದ್ದಿಯಾಗಿದ್ದರು.
ಬಾಲಕ್ ನಾಥ್: ರಾಜಸ್ಥಾನದ ಯೋಗಿ ಎಂದೇ ಖ್ಯಾತಿಯಾಗಿರುವ ಇವರು ಪ್ರಸ್ತುತ ಅಲ್ವಾರ್ನಿಂದ ಸಂಸದ. 2024 ರ ಲೋಕಸಭಾ ಚುನಾವಣೆಯ ಮೊದಲು ರಾಜಸ್ಥಾನದಲ್ಲಿ ಯುಪಿ ಶೈಲಿಯ ರಾಜಕೀಯವನ್ನು ಮಾಡಲು ಬಿಜೆಪಿ ಬಯಸಿದರೆ ಬಾಲಕ್ ನಾಥ್ ಗೆ ಮುಖ್ಯಮಂತ್ರಿ ಹುದ್ದೆಗೇರುವ ಅವಕಾಶವಿದೆ. ಅವರು ಅಲ್ವಾರ್ನಿಂದ ಸಂಸದರಾಗಿದ್ದರೂ ತಿಜಾರಾ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದರು.