Advertisement

BIGG BOSS: ಜೈಲಿನಿಂದ ಬಿಡುಗಡೆ ಬಳಿಕ ಮತ್ತೆ ಬಿಗ್‌ ಬಾಸ್‌ ಮನೆಗೆ ವರ್ತೂರು ಸಂತೋಷ್ ಎಂಟ್ರಿ?

11:46 AM Oct 28, 2023 | |

ಬೆಂಗಳೂರು: ಬಿಗ್‌ ಬಾಸ್‌ ಸ್ಪರ್ಧಿ ವರ್ತೂರು ಸಂತೋಷ್‌ ಅವರು ಇತ್ತೀಚೆಗೆ ಹುಲಿ ಉಗುರು ಧರಿಸಿದ್ದ ಕಾರಣ ಅರಣ್ಯಾಧಿಕಾರಿಗಳು ಅವರನ್ನು ಬಂಧಿಸಿದ್ದರು. ಇದೀಗ ಅವರಿಗೆ ಜಾಮೀನು ಸಿಕ್ಕಿದೆ. ಅವರು ಬಿಗ್‌ ಬಾಸ್‌ ಮನೆಗೆ ಹೋಗುತ್ತಾರೋ ಇಲ್ವೋ ಎನ್ನುವುದು ಬಿಗ್‌ ಬಾಸ್‌ ವೀಕ್ಷಕರ ಕುತೂಹಲಕ್ಕೆ ಕಾರಣವಾಗಿದೆ.

Advertisement

ಆಗಿದ್ದೇನು: ಕಿಚ್ಚನ ವೀಕೆಂಡ್‌ ಕಾರ್ಯಕ್ರಮದಲ್ಲಿ ವರ್ತೂರು ಸಂತೋಷ್‌ ಅವರು ಹುಲಿ ಉಗುರಿನ ಪೆಂಡೆಂಟ್‌ ನ್ನು ಧರಿಸಿದ್ದರು. ವೈಲ್ಡ್‌ ಲೈಫ್ ಕಾನೂನು ಪ್ರಕಾರ ಇದು ಅಪರಾಧವಾಗಿದ್ದು, ಅರಣ್ಯ ಇಲಾಖೆ ಅವರು ಈ ಸಂಬಂಧ ಕೇಸ್‌ ದಾಖಲಿಸಿಕೊಂಡು ಹಳ್ಳಿಕಾರ್‌ ಸಂತೋಷ್‌ ಅವರನ್ನು ಬಿಗ್‌ ಬಾಸ್‌ ಮನೆಯಿಂದಲೇ ಬಂಧಿಸಿ, ವಿಚಾರಣೆ ನಡೆಸಿದ್ದರು.‌ ಆ ಬಳಿಕ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು.

ವರ್ತೂರ್‌ ಸಂತೋಷ್‌ಗೆ ನ್ಯಾಯಾಲಯವು ಷರತ್ತುಬದ್ದ ಜಾಮೀನು ಮಂಜೂರು ಮಾಡಿದೆ. 4 ಸಾವಿರ ರೂ. ಭದ್ರತೆ, ಒಬ್ಬರ ಶ್ಯೂರಿಟಿ ಒದಗಿಸುವಂತೆ ಸಂತೋಷ್‌ಗೆ ಇಲ್ಲಿನ 2ನೇ ಎಸಿಜೆಎಂ ನ್ಯಾಯಾಲಯ ಜಾಮೀನು ನೀಡಿದೆ. ವರ್ತೂರು ಸಂತೋಷ್‌ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ತೀರ್ಪನ್ನು ನ್ಯಾಯಾಲಯವು ಶುಕ್ರವಾರಕ್ಕೆ ಕಾಯ್ದಿರಿಸಿತ್ತು.

ಇದೀಗ ಸಂತೋಷ್‌ ಜಾಮೀನು ಪಡೆದು ಬಿಗ್‌ ಬಾಸ್‌ ಮನೆಗೆ ಹೋಗುತ್ತಾರೆಯೇ ಅಥವಾ ತನ್ನ ಊರಿಗೆ ಮರಳುತ್ತಾರ? ಎಂದು ಬಿಗ್‌ ಬಾಸ್‌ ವೀಕ್ಷಕರು ಕುತೂಹಲದಿಂದ ಯೋಚನೆ ಮಾಡುತ್ತಿದ್ದಾರೆ. ಮೂಲಗಳ ಪ್ರಕಾರ  ಜೈಲಿನಿಂದ ಹೊರಬಂದ ಅವರು ಮತ್ತೆ ಬಿಗ್‌ ಬಾಸ್‌ ಹೋಗಿದ್ದಾರೆ ಎನ್ನಲಾಗಿದೆ.  ಕಿಚ್ಚನ ವೀಕೆಂಡ್‌ ಕಾರ್ಯಕ್ರಮದಲ್ಲಿ ಅವರು ಕಾಣಿಸಿಕೊಳ್ಳಲಿದ್ದು, ಅಲ್ಲಿಂದ ಮತ್ತೆ ದೊಡ್ಮನೆ ಒಳಗೆ ಕಾಲಿಡುತ್ತಾರೆ ಎನ್ನಲಾಗಿದೆ.

ಹುಲಿ ಉಗುರು ಪ್ರಕರಣ ಸದ್ಯ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದೆ. ಸೆಲೆಬ್ರಿಟಿಗಳು ಹಾಗೂ ರಾಜಕೀಯ ವ್ಯಕ್ತಿಗಳು ಹುಲಿ ಉಗುರು ಧರಿಸಿದ ಆರೋಪದಲ್ಲಿ ಕಾನೂನು ಕುಣಿಕೆಯಲ್ಲಿ ಸಿಲುಕಿಕೊಳ್ಳುವ ಭೀತಿಯಲ್ಲಿದ್ದಾರೆ.

Advertisement

 

Advertisement

Udayavani is now on Telegram. Click here to join our channel and stay updated with the latest news.

Next