Advertisement

BBK11: ಬಿಗ್ ಬಾಸ್ ಸೀಸನ್ 10 ಜೈಲಲ್ಲಿ ವೀಕ್ಷಿಸಿ, 11ರ ಸ್ಪರ್ಧಿಯಾದ ಚೈತ್ರಾ

10:32 PM Sep 29, 2024 | Team Udayavani |

ಬೆಂಗಳೂರು:  ಕಿಚ್ಚ ಸುದೀಪ್ (Kiccha Sudeep) ನಡೆಸಿಕೊಡುವ ಬಿಗ್‌ ಬಾಸ್ ಕನ್ನಡ (Bigg Boss Kannada -11) ದ ಈ ಸೀಸನ್ ನಲ್ಲಿ ‌ಇದುವರೆಗೆ ಕಲರ್ ಫುಲ್ ವ್ಯಕ್ತಿತ್ವದ ಸ್ಪರ್ಧಿಗಳು ದೊಡ್ಮನೆಯ ಬಿಗ್ ಬಾಸ್ ಆಟಕ್ಕೆ ಸಿದ್ದರಾಗಿದ್ದಾರೆ.

Advertisement

‘ಸ್ವರ್ಗ – ನರಕ’ದ ಮನೆಯೊಳಗೆ ಸ್ಪರ್ಧಿಗಳು ದಿನ ಕಳೆಯಲಿದ್ದಾರೆ. ಕಿರುತೆರೆ ನಟ, ನಟಿಯರು, ವಕೀಲ ಸೇರಿದಂತೆ ನಾನಾ ಸ್ಪರ್ಧಿಗಳು ಬಿಗ್ ಬಾಸ್ ಮನೆಯೊಳಗೆ ಹೋಗಿದ್ದಾರೆ.

ವಿವಾದದಿಂದಲೇ ಸುದ್ದಿಯಾಗಿರುವ ಕರಾವಳಿ ಮೂಲದ ಚೈತ್ರಾ ಅವರು ಬಿಗ್ ಬಾಸ್ ಮನೆಗೆ ಪ್ರವೇಶಿಸಿದ್ದಾರೆ. ನಿನ್ನೆಯೇ ಅವರ ಹೆಸರನ್ನು ರಿವೀಲ್ ಆಗಿತ್ತು.

ಯಾರು ಈ ಫೈರ್ ಬ್ರ್ಯಾಂಡ್..?: ಕುಂದಾಪುರ ಮೂಲದ ಚೈತ್ರಾ ಆ ಭಾಗದಲ್ಲಿ ವಾದ – ವಿವಾದದಿಂದಲೇ ಸುದ್ದಿ ಆಗಿದ್ದವರು.

ಕಳೆದ ಕೆಲ ಸಮಯದ ಹಿಂದಷ್ಟೇ ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ಹೇಳಿ ವಂಚನೆ ಮಾಡಿದ ಆರೋಪ ಅವರ ಮೇಲೆ ಕೇಳಿ ಬಂದಿತ್ತು. ಈ ಪ್ರಕರಣದಲ್ಲಿ ಅವರನ್ನು ಬಂಧಿಸಲಾಗಿತ್ತು.

Advertisement

ಹಿಂದೂ ಫೈರ್‌ ಬ್ರ್ಯಾಂಡ್‌ ಎಂದೇ ಖ್ಯಾತಿಯಾಗಿದ್ದ ಕುಂದಾಪುರ ಮೂಲದ ಚೈತ್ರಾ ಈ ಬಾರಿ ಬಿಗ್‌ ಬಾಸ್‌ ಮನೆಯೊಳಗೆ ಸ್ಪರ್ಧಿಯಾಗಿ ಎಂಟ್ರಿ ಕೊಟ್ಟಿದ್ದಾರೆ. ಕಳೆದ ಕೆಲ ಸಮಯದ ಹಿಂದಷ್ಟೇ ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ಹೇಳಿ ವಂಚನೆ ಮಾಡಿದ ಆರೋಪ ಅವರ ಮೇಲೆ ಕೇಳಿ ಬಂದಿತ್ತು. ಈ ಪ್ರಕರಣದಲ್ಲಿ ಅವರನ್ನು ಬಂಧಿಸಲಾಗಿತ್ತು. ಜಾಮೀನಿನ ಮೇಲೆ ಅವರು ಬಿಡುಗಡೆ ಆಗಿದ್ದಾರೆ.

ಚೈತ್ರಾ ಮೂಲತಃ ಉಡುಪಿ ಜಿಲ್ಲೆಯ ಕುಂದಾಪುರ ಮೂಲದವರು. ತೆಕ್ಕಟ್ಟೆ ಎಂಬಲ್ಲಿ ಶಾಲೆ ಹಾಗೂ ಪಿಯುಸಿ ಶಿಕ್ಷಣ ಪಡೆದ ಚೈತ್ರಾ ಕುಂದಾಪುರ ಪದವೀಧರೆ. ಮಂಗಳೂರು ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದ ಚೈತ್ರಾ ಕುಂದಾಪುರ ಖ್ಯಾತ ಸುದ್ದಿ ವಾಹಿನಿಗಳಲ್ಲಿ ಆಂಕರ್‌ ಆಗಿ, ಜನಪ್ರಿಯ ದಿನಪತ್ರಿಕೆಗಳಲ್ಲಿ ಉಪ ಸಂಪಾದಕಿಯಾಗಿ ಕೆಲಸ ಮಾಡಿದ್ದಾರೆ. ಅವರಿಗೆ  ಯುವ ಮಾಧ್ಯಮ ಪ್ರಶಸ್ತಿಯೂ ಲಭಿಸಿತ್ತು.

ವಿದ್ಯಾರ್ಥಿ ಸಂಘಟನೆ ಸೇರಿದಂತೆ ಹಿಂದೂಪರ ಸಂಘಟನೆಯಲ್ಲೂ ಅವರು ಕಾರ್ಯಕರ್ತೆ ಆಗಿದ್ದರು. ಲವ್ ಜಿಹಾದ್ ಪ್ರಕರಣಗಳ ವಿರುದ್ಧ ಚೈತ್ರಾ ಕುಂದಾಪುರ ಹೋರಾಡಿದ್ದರು. ಚೈತ್ರಾ ಕುಂದಾಪುರ ಬರೆದ ‘ಪ್ರೇಮಪಾಶ’ ಕೃತಿ ವಿವಾದ ಸೃಷ್ಟಿಸಿತ್ತು.

ಅವರಿಗೆ ಪ್ರೇಕ್ಷಕರಿಂದ 15 ನಿಮಿಷದಲ್ಲಿ 2.80 ಲಕ್ಷ ವೋಟಿಂಗ್ ಬಂದಿದೆ. ಆದರೆ ಅವರು ನರಕಕ್ಕೆ ಹೋಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next