Advertisement

Basavaraj Bommai: ರಾಜ್ಯ ರಾಜಕಾರಣದಲ್ಲಿ ಶೀಘ್ರವೇ ದೊಡ್ಡ ಬೆಳವಣಿಗೆ; ಬೊಮ್ಮಾಯಿ

09:23 PM Jun 20, 2024 | Team Udayavani |

ದಾವಣಗೆರೆ: ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಬಹಳ ದೊಡ್ಡ ರಾಜಕೀಯ ಬೆಳವಣಿಗೆಯಾಗುತ್ತದೆ. ಕಾಂಗ್ರೆಸ್‌ ಶಾಸಕರ ಅಸಮಾಧಾನ ಬಗ್ಗೆ ಸಂಸದ ಗೋವಿಂದ ಕಾರಜೋಳ ಹೇಳಿಕೆಯಲ್ಲಿ ಸತ್ಯಾಂಶವಿದೆ ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿ, ಗೋವಿಂದ ಕಾರಜೋಳ ಬಿಜೆಪಿಯ ಹಿರಿಯ ಮುಖಂಡರು. ಬಹಳ ವರ್ಷದಿಂದ ರಾಜಕಾರಣದಲ್ಲಿದ್ದಾರೆ. ಅವರು ಪಕ್ಕಾ ಮಾಹಿತಿ ಇಟ್ಟುಕೊಂಡೇ ಹೇಳಿರುತ್ತಾರೆ. ಕಾಂಗ್ರೆಸ್‌ ಶಾಸಕರೇ ಪಕ್ಷದ ವರಿಷ್ಠರ ವಿರುದ್ಧ ತಿರುಗಿ ಬಿದ್ದಿದ್ದಾರೆ. ಜನರ ಬಳಿಗೆ ಹೋಗಲು ಅವರಿಗೆ ಮುಖ ಇಲ್ಲ. ಶಾಸಕರ ಅನುದಾನ ನೀಡುತ್ತಿಲ್ಲ. ಆಡಳಿತ ಹದಗೆಟ್ಟಿದ್ದು, ಅಧಿ ಕಾರಿಗಳು ಸರ್ಕಾರದ ಮಾತು ಕೇಳುತ್ತಿಲ್ಲ. ರಾಜ್ಯದಲ್ಲಿ ಸರ್ಕಾರ ಇದೆಯೋ ಇಲ್ಲವೋ ಎನ್ನುವಷ್ಟರ ಮಟ್ಟಿಗೆ ಹದಗೆಟ್ಟಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next