Advertisement

ಸಂಪುಟದಿಂದ ಸಚಿವನನ್ನು ವಜಾಗೊಳಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್

10:01 AM Mar 28, 2022 | Team Udayavani |

ಪಾಟ್ನಾ: ಮೀನುಗಾರಿಕೆ ಮತ್ತು ಪಶುಸಂಗೋಪನಾ ಸಚಿವ ಮುಖೇಶ್ ಸಹಾನಿ ಅವರನ್ನು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಭಾನುವಾರ ತಮ್ಮ ಸಂಪುಟದಿಂದ ವಜಾ ಮಾಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

Advertisement

ವಿಕಾಸಶೀಲ್ ಇನ್ಸಾನ್ ಪಕ್ಷದ ಸ್ಥಾಪಕ ಮುಖ್ಯಸ್ಥರಾಗಿರುವ ಮುಖೇಶ್ ಸಹಾನಿ ಅವರು “ಇನ್ನು ಮುಂದೆ ಎನ್‌ಡಿಎ ಭಾಗವಾಗಿಲ್ಲ” ಎಂದು ವಾದಿಸಿದ ಮಿತ್ರಪಕ್ಷ ಬಿಜೆಪಿಯಿಂದ ಲಿಖಿತ ಸಲ್ಲಿಕೆಯಾದ ನಂತರ ಈ ವಜಾಗೊಳಿಸಿದ ಶಿಫಾರಸನ್ನು ರಾಜ್ಯಪಾಲರಿಗೆ ಕಳುಹಿಸಲಾಗಿದೆ ಎಂದು ವರದಿಯಾಗಿದೆ.

ಸಹಾನಿ ಅವರು ವಿಧಾನಸಭೆ ಚುನಾವಣೆಯಲ್ಲಿ ಸೋಲನುಭವಿಸಿದ್ದರು. ಆದರೆ ಬಿಜೆಪಿ ನಿರ್ದೇಶನದನ್ವಯ ಅವರನ್ನು ವಿಧಾನ ಪರಿಷತ್ತಿಗೆ ಆಯ್ಕೆ ಮಾಡಲಾಗಿತ್ತು. ಬಳಿಕ ಸಂಪುಟಕ್ಕೆ ಸೇರಿಸಲಾಗಿತ್ತು.

ಇದನ್ನೂ ಓದಿ:ಎಳೆ ಮನಸ್ಸಿನ ಮಕ್ಕಳ ಮೇಲೆ ಭಾವನೆಗಳನ್ನು ಹೇರುವುದು ಬೇಡ: ಕುಮಾರಸ್ವಾಮಿ

ಮುಖೇಶ್ ಸಹಾನಿ ಅವರು ನಿತೀಶ್ ಕುಮಾರ್ ಸಂಪುಟದಲ್ಲಿ ಮೀನುಗಾರಿಕೆ ಮತ್ತು ಪಶುಸಂಗೋಪನಾ ಸಚಿವರಾಗಿದ್ದರು. ಬಿಹಾರದಲ್ಲಿ ಜೆಡಿಯು ಮತ್ತು ಬಿಜೆಪಿ ಮೈತ್ರಿ ಸರ್ಕಾರವಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next