Advertisement

ಬಿಹಾರ: ಅಗ್ನಿಪಥ್ ವಿರುದ್ಧ ಪ್ರತಿಭಟನೆ, ಹಿಂಸಾಚಾರ-ಬಂಧಿತ ಮಾವೋವಾದಿ ಮುಖಂಡ ಹೇಳಿದ್ದೇನು?

12:22 PM Aug 06, 2022 | Team Udayavani |

ಪಾಟ್ನಾ: ದೇಶಾದ್ಯಂತ ತೀವ್ರ ವಿವಾದ ಹಾಗೂ ಪ್ರತಿಭಟನೆಗೆ ಕಾರಣವಾಗಿದ್ದ ಅಗ್ನಿಪಥ್ ಯೋಜನೆಯ ವಿರುದ್ಧದ ಪ್ರತಿಭಟನೆಯಲ್ಲಿ ಮಾವೋವಾದಿಗಳು ಶಾಮೀಲಾಗಿದ್ದರು ಎಂಬ ವಿಷಯವನ್ನು ಬಿಹಾರ ಪೊಲೀಸರು ಬಹಿರಂಗಗೊಳಿಸಿದ್ದಾರೆ.

Advertisement

ಇದನ್ನೂ ಓದಿ:ರಾಜ್ಯದಲ್ಲಿ ಮಂಕಿಪಾಕ್ಸ್‌ ಪ್ರಕರಣ ಕಂಡುಬಂದಿಲ್ಲ: ಸಚಿವ ಡಾ.ಕೆ.ಸುಧಾಕರ್‌ ಸ್ಪಷ್ಟನೆ

ಮಾವೋವಾದಿ ಉನ್ನತ ಮುಖಂಡನ ಬಂಧನದ ನಂತರ ಈ ವಿಷಯ ಬೆಳಕಿಗೆ ಬಂದಿರುವುದಾಗಿ ಬಿಹಾರ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಜೂನ್ ನಲ್ಲಿ ಅಗ್ನಿಪಥ್ ಯೋಜನೆ ವಿರೋಧಿಸಿ ಬಿಹಾರದ ಲಖಿಸರಾಯ್ ನಲ್ಲಿ ರೈಲಿಗೆ ಬೆಂಕಿ ಹಚ್ಚಿರುವ ಘಟನೆಯಲ್ಲಿ ಮಾವೋವಾದಿಗಳು ಮತ್ತು ಬೆಂಬಲಿಗರು ಪ್ರಮುಖ ಪಾತ್ರ ವಹಿಸಿರುವುದಾಗಿ ತನಿಖೆಯ ವೇಳೆ ಮಾವೋವಾದಿ ಮುಖಂಡ ಬಾಯ್ಬಿಟ್ಟಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿರುವುದಾಗಿ ವರದಿ ಹೇಳಿದೆ.

ಪ್ರತಿಭಟನೆ ವೇಳೆ ರೈಲ್ವೆ ಆಸ್ತಿಗಳನ್ನು ಧ್ವಂಸಗೊಳಿಸಲು ಮತ್ತು ರೈಲಿಗೆ ಬೆಂಕಿ ಹಚ್ಚಲು ಮಾವೋವಾದಿ ಗುಂಪು ಪ್ರಚೋದನೆ ನೀಡಿರುವುದಾಗಿ ಹಿರಿಯ ಪೊಲೀಸ್ ಅಧಿಕಾರಿ ಪಂಕಜ್ ಕುಮಾರ್ ತಿಳಿಸಿದ್ದಾರೆ.

Advertisement

ಯಾರೀತ ಮಾವೋವಾದಿ ಮುಖಂಡ ಮನಶ್ಯಾಮ್:

ತೆಲಂಗಾಣ ಪೊಲೀಸ್ ಇಲಾಖೆಯ ಗುಪ್ತಚರ ವಿಭಾಗ ನೀಡಿರುವ ಮಾಹಿತಿ ಮೇರೆಗೆ ಮಾವೋವಾದಿ ಮುಖಂಡ ಮನಶ್ಯಾಮ್ ದಾಸ್ ನನ್ನು ಲಖಿಸರಾಯ್ ನಲ್ಲಿ ಬಿಹಾರ ಪೊಲೀಸರು ಬಂಧಿಸಿದ್ದರು. ಈತ ಕೆಲವು ವರ್ಷಗಳ ಹಿಂದೆ ಇಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ತನ್ನ ಕಾರ್ಯ ಚಟುವಟಿಕೆ ನಡೆಸುತ್ತಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮನಶ್ಯಾಮ್ ಬಿಹಾರ, ಜಾರ್ಖಂಡ್, ಪಶ್ಚಿಮಬಂಗಾಳ ಮತ್ತು ತೆಲಂಗಾಣದ ನಕ್ಸಲೈಟ್ ಸಂಘಟನೆಯ ಉನ್ನತ ಮುಖಂಡರ ಜೊತೆ ನೇರ ಸಂಪರ್ಕದಲ್ಲಿದ್ದು, ಈ ಮೂಲಕ ಲಖಿಸರಾಯ್ ನಗರದಲ್ಲಿದ್ದುಕೊಂಡು ಮನಶ್ಯಾಮ್ ಮಾವೋವಾದಿಗಳಿಗೆ ನೆರವು ನೀಡುತ್ತಿದ್ದ ಎಂದು ಪೊಲೀಸರು ವಿವರಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next