Advertisement

ಬಿಹಾರ ರಾಜ್ಯಪಾಲರ ಬೆಂಗಾವಲು ವಾಹನ ಅಪಘಾತ: 6 ಮಂದಿಗೆ ಗಾಯ

05:41 PM Apr 17, 2023 | Team Udayavani |

ಬಿಹಾರ: ಬಿಹಾರದ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರ ಬೆಂಗಾವಲು ವಾಹನವೊಂದು ಬಿಹಾರದ ಮುಜಾಫರ್‌ಪುರ ರಾಷ್ಟ್ರೀಯ ಹೆದ್ದಾರಿಯ ಭಗವಾನ್‌ಪುರ ಬಳಿ ಸೋಮವಾರ ಅಪಘಾತಕ್ಕೀಡಾಗಿ ಆರು ಮಂದಿ ಗಾಯಗೊಂಡಿದ್ದಾರೆ.

Advertisement

ರಾಷ್ಟ್ರೀಯ ಹೆದ್ದಾರಿಯಲ್ಲಿ ರಾಜ್ಯಪಾಲ ವಾಹನಕ್ಕೆ ಬೆಂಗಾವಲಾಗಿ ಹೋಗುತ್ತಿದ್ದ ಅಗ್ನಿಶಾಮಕ ದಳದ ವಾಹನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಬಳಿಕ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ ಪರಿಣಾಮ ರಿಕ್ಷಾದಲ್ಲಿದ್ದ ಮೂವರು ಮತ್ತು ಅಗ್ನಿಶಾಮಕ ದಳದ ಮೂವರು ಸಿಬ್ಬಂದಿಗಳು ಸೇರಿ ಆರು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ರಾಜ್ಯಪಾಲರು ಪಾಟ್ನಾ ದಿಂದ ಮುಜಾಫರ್‌ಪುರಕ್ಕೆ ತೆರಳುತ್ತಿದ್ದ ಸಂದರ್ಭ ಬೆಂಗಾವಲು ಪಡೆಯ ಕೊನೆಯ ವಾಹನವಾದ ಅಗ್ನಿಶಾಮಕ ವಾಹನ ನಿಯಂತ್ರಣ ತಪ್ಪಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ರಾಜ್ಯಪಾಲರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next