Advertisement

ಸುಶಾಂತ್ ಪ್ರಕರಣ; ಮುಂಬೈ ಪೊಲೀಸರ ಅನುಮತಿ ಇಲ್ಲದೆ ಬಿಹಾರ ಪೊಲೀಸರು ತನಿಖೆ ನಡೆಸುವಂತಿಲ್ಲ

01:04 PM Aug 01, 2020 | Nagendra Trasi |

ಮುಂಬೈ: ಮಹಾರಾಷ್ಟ್ರ ಪೊಲೀಸರ ಅನುಮತಿ ಇಲ್ಲದೇ ಯಾವುದೇ ಕಾರಣಕ್ಕೂ ಬಿಹಾರ ಪೊಲೀಸರು ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದ ತನಿಖೆ ನಡೆಸುವಂತಿಲ್ಲ ಎಂದು ಸಚಿವ ಶಂಭುರಾಜ್ ದೇಸಾಯಿ ತಿಳಿಸಿದ್ದಾರೆ.

Advertisement

ಬಾಲಿವುಡ್ ನಟ ಸುಶಾಂತ್ ಸಿಂಗ್ ಸಾವಿನ ಪ್ರಕರಣದ ಬಗ್ಗೆ ಯಾವುದೇ ತನಿಖೆ ನಡೆಸುವ ಮುನ್ನ ಬಿಹಾರ ಪೊಲೀಸರು ಮುಂಬೈ ಪೊಲೀಸರಿಗೆ ಮಾಹಿತಿ ನೀಡಲೇಬೇಕು ಎಂದು ಸ್ಪಷ್ಟಪಡಿಸಿರುವುದಾಗಿ ವರದಿ ವಿವರಿಸಿದೆ.

ಜೀ ಮೀಡಿಯಾ ಜತೆಗಿನ ವಿಶೇಷ ಮಾತುಕತೆಯಲ್ಲಿ ಮಾತನಾಡಿದ ಅವರು, ಬಿಹಾರ ಪೊಲೀಸರು ದಾಖಲಿಸಿರುವ ಎಫ್ ಐಆರ್ ನಲ್ಲಿ ಸುಶಾಂತ್ ಸಿಂಗ್ ಕುಟುಂಬದವರು ಯಾರ ಹೆಸರನ್ನೂ ನಮೂದಿಸದಿರುವಂತೆ ಮುಂಬೈ ಪೊಲೀಸರು ಮಾಹಿತಿ ನೀಡಿರುವುದಾಗಿ ತಿಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಬಾಲಿವುಡ್ ನ ಗಣ್ಯರನ್ನೂ ವಿಚಾರಣೆಗೊಳಪಡಿಸುತ್ತಿದೆ. ಅಲ್ಲದೇ ಪ್ರಕರಣ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ ಎಂದು ಹೇಳಿದರು.

ಏತನ್ಮಧ್ಯೆ ಸುಶಾಂತ್ ಸಿಂಗ್ ಗೆಳತಿ ರಿಯಾ ಚಕ್ರವರ್ತಿ ಕೂಡಾ ನಟ ಸುಶಾಂತ್ ಸಾವಿನ ಪ್ರಕರಣದಲ್ಲಿನ ತನ್ನ ಕೈವಾಡದ ಆರೋಪದ ಕುರಿತ ತನಿಖೆಯನ್ನು ಮುಂಬೈ ಪೊಲೀಸರಿಗೆ ವರ್ಗಾಯಿಸಬೇಕೆಂದು ಕೋರಿ ಸುಪ್ರೀಂಕೋರ್ಟ್ ಕಟಕಟೆ ಏರಿರುವುದಾಗಿ ವರದಿ ತಿಳಿಸಿದೆ. ಆದರೆ ರಿಯಾ ಮನವಿಯನ್ನು ಕೋರ್ಟ್ ಪುರಸ್ಕರಿಸಬಾರದು ಎಂದು ಸುಶಾಂತ್ ಕುಟುಂಬದವರು ಕೇವಿಯಟ್ ದಾಖಲಿಸಿರುವುದಾಗಿ ವರದಿ ಹೇಳಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next