Advertisement

15 ವರ್ಷ ಆರ್‌ಜೆಡಿ ಆಡಳಿತಾವಧಿಯಲ್ಲಿ ಏನಾದರೂ ತಪ್ಪಾಗಿದ್ದರೆ ಕ್ಷಮಿಸಿ: ತೇಜಸ್ವಿ

06:39 PM Jul 03, 2020 | Sriram |

ಪಾಟ್ನಾ: “ಬಿಹಾರದಲ್ಲಿ 15 ವರ್ಷಗಳ ಆರ್‌ಜೆಡಿ ಆಡಳಿತಾವಧಿಯಲ್ಲಿ ಏನಾದರೂ ತಪ್ಪುಗಳಾಗಿದ್ದರೆ ಜನರು ನಮ್ಮನ್ನು ಕ್ಷಮಿಸಬೇಕು.

Advertisement

ನಾನು ನಿಮ್ಮಲ್ಲಿ ಕ್ಷಮೆ ಕೋರುತ್ತೇನೆ’ ಎಂದು ಆರ್‌ಜೆಡಿ ನಾಯಕ, ಮಾಜಿ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್‌ ತಿಳಿಸಿದ್ದಾರೆ.

ಚುನಾವಣಾ ರ‍್ಯಾಲಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ರಾಜ್ಯದಲ್ಲಿ ಲಾಲು ಪ್ರಸಾದ್‌ ಯಾದವ್‌ ಒಬ್ಬ ಮುಖ್ಯಮಂತ್ರಿಯಾಗಿ ನಮಗೆ ನ್ಯಾಯ ಒದಗಿಸಿಲ್ಲ ಎಂದು ಯಾರೊಬ್ಬರೂ ಹೇಳಲು ಸಾಧ್ಯವಿಲ್ಲ.

ಬಿಹಾರದಲ್ಲಿ 15 ವರ್ಷಗಳ ಕಾಲ ಆಡಳಿತ ನಡೆಸಿದ ಆರ್‌ಜೆಡಿ ಸಣ್ಣ ಪಾತ್ರ ವಹಿಸಿತ್ತು.

ರಾಜ್ಯದಲ್ಲಿ ಪ್ರಸ್ತುತ ಇರುವ ಸರ್ಕಾರದಂತೆ ಕೇಂದ್ರದಲ್ಲಿ ನಮ್ಮ ಪಕ್ಷ ಅಧಿಕಾರದಲ್ಲಿ ಇರಲಿಲ್ಲ ಎಂದಿದ್ದಾರೆ.

Advertisement

ಬಿಹಾರವು ನಿರುದ್ಯೋಗ ಕೇಂದ್ರವಾಗಿದೆ. ಇಲ್ಲಿ ಉದ್ಯೋಗಗಳನ್ನು ಕಲ್ಪಿಸಿದ್ದರೆ ರಾಜ್ಯದ ಕಾರ್ಮಿಕರು ಬೇರೆ ರಾಜ್ಯಗಳಿಗೆ ಏಕೆ ಹೋಗುತ್ತಿದ್ದರು?, ಜನರಿಗೆ ಉದ್ಯೋಗ ಒದಗಿಸುವಲ್ಲಿ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ವಿಫ‌ಲರಾಗಿದ್ದಾರೆ ಎಂದು ತೇಜಸ್ವಿ ಹರಿಹಾಯ್ದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next