Advertisement

ಉತ್ತರಪ್ರದೇಶ, ಬಿಹಾರದಲ್ಲಿ ವರುಣನ ರೌದ್ರಾವತಾರ; ಸಾವಿನ ಸಂಖ್ಯೆ 115ಕ್ಕೆ ಏರಿಕೆ

09:08 AM Oct 01, 2019 | Nagendra Trasi |

ನವದೆಹಲಿ: ಬಿಹಾರದಲ್ಲಿ ಶನಿವಾರ ರಾತ್ರಿಯಿಂದ ಭಾನುವಾರದವರೆಗೆ ಸುರಿದ ಧಾರಾಕಾರ ಮಳೆಗೆ ಕನಿಷ್ಠ 29ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, ಪಾಟ್ನ ಸೇರಿದಂತೆ ರಾಜ್ಯದ ಹಲವು ಪ್ರದೇಶಗಳು ಸಂಪೂರ್ಣ ಜಲಾವೃತವಾಗಿದೆ. ಶಾಲಾ, ಕಾಲೇಜುಗಳಿಗೆ ಮಂಗಳವಾರದವರೆಗೆ ರಜೆ ಘೋಷಿಸಲಾಗಿದೆ. ಮುಂದಿನ 24 ಗಂಟೆಗಳಲ್ಲಿ ರಾಜ್ಯದ 24 ಜಿಲ್ಲೆಗಳಲ್ಲಿ ಮತ್ತೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

Advertisement

ಉತ್ತರಪ್ರದೇಶ ಹಾಗೂ ಬಿಹಾರದಲ್ಲಿ ವರುಣನ ಆರ್ಭಟಕ್ಕೆ ಸಾವನ್ನಪ್ಪಿದವರ ಸಂಖ್ಯೆ 115ಕ್ಕೆ ಏರಿಕೆಯಾಗಿದೆ. ಪಾಟ್ನದಲ್ಲಿ ಈವರೆಗೆ 26 ಸಾವಿರ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.

ಸಾವಿರಾರು ಜನರನ್ನು ಸುರಕ್ಷಿತ ಸ್ಥಳಖ್ಕೆ ಸ್ಥಳಾಂತರಿಸಲಾಗಿದೆ. ಪ್ರವಾಹ ಹಾಗೂ ತಗ್ಗುಪ್ರದೇಶದಲ್ಲಿ ಸಿಲುಕಿಕೊಂಡಿರುವ ಜನರನ್ನು ರಕ್ಷಿಸಲು ಮತ್ತು ಆಹಾರ ವಸ್ತುಗಳನ್ನು ಜನರಿಗೆ ನೀಡಲು ಎರಡು ಹೆಲಿಕಾಪ್ಟರ್ ಅನ್ನು ಒದಗಿಸುವಂತೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಕೇಂದ್ರ ಸರಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.

ಅಲ್ಲದೇ ನೀರನ್ನು ಬೇರೆಡೆಗೆ ಬಿಡುವ ಮೆಶಿನ್ ಗಳನ್ನು ನೀಡುವಂತೆ ವಾಯುಪಡೆಗೆ ಮನವಿ ಮಾಡಿಕೊಳ್ಳಲಾಗಿದೆ ಎಂದು ನಿತೀಶ್ ಕುಮಾರ್ ಸುದ್ದಿಗಾರರ ಜತೆ ಮಾತನಾಡುತ್ತ ತಿಳಿಸಿದ್ದಾರೆ.

ಭಾರೀ ಮಳೆಯಿಂದಾಗಿ ಸಾವಿರಾರು ನಿವಾಸಿಗಳು ವಿದ್ಯುತ್ ಹಾಗೂ ನೀರು ಸರಬರಾಜು ಇಲ್ಲದೆ ಕಾಲ ಕಳೆಯುವಂತಾಗಿದೆ. ಜನರನ್ನು, ಜಾನುವಾರುಗಳನ್ನು ರಕ್ಷಿಸಲು ಎನ್ ಡಿಆರ್ ಎಫ್, ಅಗ್ನಿಶಾಮಕ ದಳ ಕಾರ್ಯಾಚರಣೆ ನಡೆಸುತ್ತಿರುವುದಾಗಿ ವರದಿ ವಿವರಿಸಿದೆ.

Advertisement

ಭಾರೀ ಮಳೆಯಿಂದಾಗಿ ರೈಲ್ವೆ ಹಳಿ ಕೊಚ್ಚಿಕೊಂಡು ಹೋಗಿದೆ, ಸೇತುವೆಗಳು ಕಡಿದು ಹೋಗಿ ಸಂಪರ್ಕ ಕಡಿತಗೊಂಡಿದೆ. ಇದರಿಂದಾಗಿ ಬಿಹಾರದಲ್ಲಿ ಹಲವು ರೈಲು ಸಂಚಾರ ರದ್ದುಗೊಳಿಸಲಾಗಿದೆ. ಬಸ್ ಸಂಚಾರವೂ ಸ್ಥಗಿತಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉತ್ತರಪ್ರದೇಶದಲ್ಲಿ ಕಳೆದ ಗುರುವಾರದಿಂದ ಈವರೆಗೆ ಭಾರೀ ಮಳೆಗೆ 87 ಜನರು ಸಾವನ್ನಪ್ಪಿದ್ದಾರೆ. ಜನರಿಗೆ ಸೂಕ್ತ ನೆರವು ಒದಗಿಸಿಕೊಡುವಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

1960ರ ಬಳಿಕ ಇದೇ ಮೊದಲು
ನಾಲ್ಕು ತಿಂಗಳ ಮುಂಗಾರು ಮಳೆಗೆ ದೇಶದಲ್ಲಿ ಸೋಮವಾರ ಅಧಿಕೃತ ವಿದಾಯ ಹೇಳಲಿದೆ. ಆದರೆ ಭಾರತೀಯ ಹವಾಮಾನ ಇಲಾಖೆಯ ಮಹಾನಿರ್ದೇಶಕ ಮೃತ್ಯುಂಜಯ ಮಹಾಪಾತ್ರ ಆ ರೀತಿಯಾಗಲು  ಸಾಧ್ಯವಿಲ್ಲ. ಅದು ಇನ್ನೂ ಕೆಲ ದಿನಗಳವರೆಗೆ ಮುಂದುವರಿಯಲಿದೆ. 1960ರ ಬಳಿಕ ಇದೇ ಮೊದಲ ಬಾರಿಗೆ ಮುಂಗಾರು ಅತ್ಯಂತ ವಿಳಂಬವಾಗಿ ಮುಕ್ತಾಯವಾಗಲಿದೆ ಎಂದಿದ್ದಾರೆ. ಅವರು. ಕೊನೆಯ ಹಂತವಾಗಿ ರಾಜ ಸ್ಥಾನದ ಗಂಗಾನಗರ್‌ಗೆ ಮುಂಗಾರು ಪ್ರವೇಶ ಮಾಡಲಿದೆ. ಬಿಹಾರ, ಉತ್ತರ ಪ್ರದೇಶಗಳಲ್ಲಿ ಅದಿನ್ನೂ ಸಕ್ರಿಯವಾಗಿದೆ. ವಾಯುಭಾರ ಕುಸಿತದಿಂದ ಉಂಟಾದ ಈ ಮಳೆ ಅ.5ರ ವರೆಗೆ ಮುಂದುವರಿಯಲಿದೆ ಎಂದಿದ್ದಾರೆ ಮಹಾಪಾತ್ರ.

Advertisement

Udayavani is now on Telegram. Click here to join our channel and stay updated with the latest news.

Next