Advertisement

ಕಳ್ಳಭಟ್ಟಿ ಸೇವಿಸಿ 14 ಮಂದಿ ಮೃತಪಟ್ಟ ಪ್ರಕರಣ: 80 ಮಂದಿ ಸೆರೆ

12:03 AM Apr 17, 2023 | Team Udayavani |

ಮೋತಿಹಾರಿ/ಪಟ್ನಾ: ಬಿಹಾರದ ಪೂರ್ವ ಚಂಪಾ ರಣ್‌ ಜಿಲ್ಲೆಯಲ್ಲಿ ಕಳ್ಳಭಟ್ಟಿ ಸೇವನೆಯಿಂದ 14 ಮಂದಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಬಿರುಸುಗೊಂಡಿದೆ.

Advertisement

ಪೊಲೀಸರು ನೀಡಿದ ಮಾಹಿತಿ ಪ್ರಕಾರ ಇದುವರೆಗೆ ಎಂಬತ್ತು ಮಂದಿಯನ್ನು ಬಂಧಿಸಲಾಗಿದೆ. ಜತೆಗೆ ಪೊಲೀಸ್‌ ಇಲಾಖೆಯಿಂದಲೇ ಹನ್ನೊಂದು ಮಂದಿ ಸಿಬಂದಿಯನ್ನು ಸಸ್ಪೆಂಡ್‌ ಮಾಡಲಾಗಿದೆ. ಅದರಲ್ಲಿ ಒಬ್ಬರು ಸಬ್‌-ಇನ್ಸ್‌ಪೆಕ್ಟರ್‌, ಸಹಾಯಕ ಸಬ್‌-ಇನ್ಸೆ$ಪೆಕ್ಟರ್‌ ಕೂಡ ಸೇರಿದ್ದಾರೆ. ಮೋತಿಹಾರಿ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಭದ್ರತೆಗಾಗಿ ನಿಯೋಜನೆಗೊಂಡಿದ್ದ ಒಂಬತ್ತು ಮಂದಿ “ಚೌಕಿದಾರ’ರ ವಿರುದ್ಧ ಕಠಿನ ಕ್ರಮ ಕೈಗೊಳ್ಳಲಾಗಿದೆ.

ಜಿಲ್ಲೆಯ ವಿವಿಧ ಸ್ಥಳಗಳ ಮೇಲೆ ನಡೆಸಲಾಗಿರುವ ಕಾರ್ಯಾಚರಣೆಯಲ್ಲಿ ಬೃಹತ್‌ ಪ್ರಮಾಣದಲ್ಲಿ ಸಂಗ್ರಹಿಸಿ ಇರಿಸಲಾಗಿದ್ದ ಕಳ್ಳಭಟ್ಟಿಯನ್ನು ವಶ ಪಡಿಸಿಕೊಂಡು ನಾಶ ಮಾಡಲಾಗಿದೆ ಎಂದು ಪಟ್ನಾದಲ್ಲಿ ಬಿಡುಗಡೆ ಮಾಡಲಾಗಿರುವ ಹೇಳಿಕೆಯಲ್ಲಿ ತಿಳಿಸಲಾದೆ.

Advertisement

Udayavani is now on Telegram. Click here to join our channel and stay updated with the latest news.

Next