Advertisement

ಬೈಕ್ ಗೆ ಡಿಕ್ಕಿ ಹೊಡೆದ ಕಾರಿಗೆ ಬೆಂಕಿ; ಇಬ್ಬರಿಗೆ ಗಂಭೀರ ಗಾಯ

09:47 PM Dec 15, 2020 | mahesh |

ವಿಜಯಪುರ: ಬೈಕ್ ಹಾಗೂಕಾರು‌ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಹಾಗೂ‌ ಕಾರು ಹೊತ್ತಿ ಉರಿದು ಸಂಪೂರ್ಣ ಭಸ್ಮವಾದ ಘಟನೆ ಬಸವನಬಾಗೇವಾಡಿ ತಾಲೂಕಿನ ಬಸವನಹಟ್ಟಿ‌ ಕ್ರಾಸ್ ಬಳಿ‌ ಜರುಗಿದೆ.

Advertisement

ಘಟನೆಯಲ್ಲಿ ಬೈಕ್ ಸವಾರ ಮಂಜು‌ ಬೆಂಕಿಯಿಂದ ಗಂಭೀರ ಸ್ವರೂಪದ ಸುಟ್ಟ ಗಾಯಗಳಾಗಿದ್ದು, ಹಿಂಬದಿ‌ ಸವಾರನಿಗೂ ಸುಟ್ಟ ಗಾಯಗಳಾಗಿವೆ, ಕೂಡಲೇ ಗಾಯಾಳುಗಳನ್ನು ಸರ್ಕಾರಿ ತಾಲೂಕ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರು ಚಾಲಕ ಬಸವನಬಾಗೇವಾಡಿ ತಾಲೂಕಿನ ಸೋಮನಾಳ ಗ್ರಾಮದ ಮಂಜು ಪವಾಡ ಸದೃಶ ರೀತಿಯಲ್ಲಿ ಅಪಾಯದಿಂದ ‌ಪಾರಾಗಿದ್ದಾನೆ.

ಬೆಂಕಿ ದುರಂತದ ಸುದ್ದಿ ತಿಳಿಯುತ್ತಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ಬಸವನಬಾಗೇವಾಡಿ‌ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next