Advertisement

ಬೈಕ್ ಮತ್ತು ಗೂಡ್ಸ್ ರಿಕ್ಷಾಗಳ ನಡುವೆ ಅಪಘಾತ : ಬೈಕ್ ಸವಾರ ಸಾವು

06:51 PM Jan 30, 2021 | Team Udayavani |

ಮಂಡ್ಯ: ದ್ವಿಚಕ್ರ ವಾಹನ ಹಾಗೂ ಸರಕು ಸಾಗಣೆ ಮಿನಿ ಆಟೋಗಳ ನಡುವೆ ಸಂಭವಿಸಿದ ರಸ್ತೆ ಅಫಘಾತದಲ್ಲಿ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಕೆ.ಆರ್.ಪೇಟೆ ತಾಲೂಕಿನ ಸಾಧುಗೋನಹಳ್ಳಿ ಸಮೀಪದ ಕೆಜೆಬಿ ಶಾಲೆಯ ಬಳಿ ಶನಿವಾರ ಮಧ್ಯಾಹ್ನ ನಡೆದಿದೆ.

Advertisement

ಕೆ.ಆರ್.ಪೇಟೆ ತಾಲೂಕಿನ ಹೆಗ್ಗಡಹಳ್ಳಿ ಗ್ರಾಮದ ನಿವಾಸಿ ಶಿವಲಿಂಗೇಗೌಡ ಪುತ್ರ ಮನು(30) ಮೃತ ಯುವಕ. ಈತ ಪಟ್ಟಣದಿಂದ ಗ್ರಾಮಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಎದುರಿನಿಂದ ಬಂದ ಎರಡು ಆಟೋಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಘಟನೆಯಿಂದ ತೀವ್ರ ರಕ್ತಸ್ರಾವದಿಂದ ಮನು ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ತಹಶೀಲ್ದಾರ್ ಎಂ.ಶಿವಮೂರ್ತಿ, ವೃತ್ತ ನಿರೀಕ್ಷಕ ಎಂ.ಕೆ.ದೀಪಕ್, ಪಿಎಸ್‌ಐ ಬ್ಯಾಟರಾಯಗೌಡ, ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತ ದೇಹವನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎರಡು ಆಟೋ ಹಾಗೂ ದ್ವಿಚಕ್ರ ವಾಹನ ವಶಕ್ಕೆ ಪಡೆದಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ:ಸಾಲು, ಸಾಲು ಸಾವು! ನೋವಿನ ಬದುಕಿನ ನಡುವೆ ಕನಸೆಂಬ ಕುದುರೆಯೇರಿ ಯಶಸ್ಸು ಕಂಡ “ಬಿರದಾರ”

Advertisement

Udayavani is now on Telegram. Click here to join our channel and stay updated with the latest news.

Next