Advertisement

ಅರಂತೋಡು: ಆಟೋರಿಕ್ಷಾ-ಬೈಕ್ ಮಧ್ಯೆ ಅಪಘಾತ ಐಟಿಐ ವಿದ್ಯಾರ್ಥಿ ಮೃತ್ಯು; ಇನ್ನೋರ್ವ ಗಂಭೀರ

12:01 PM Sep 26, 2022 | Team Udayavani |

ಅರಂತೋಡು: ಇಲ್ಲಿಗೆ ಸಮೀಪದ ಪರಿವಾರಕಾನ ಎಂಬಲ್ಲಿ ಇಂದು ಬೆಳಗ್ಗೆ ಸಂಭವಿಸಿದ ಬೈಕ್ ಮತ್ತು ಆಟೋ ರಿಕ್ಷಾ ನಡುವಿನ ಅಪಘಾತದಲ್ಲಿ ಬೈಕ್ ಸವಾರ ಐಟಿಐ ವಿದ್ಯಾರ್ಥಿ ಮೃತಪಟ್ಟು ಇನ್ನೋರ್ವ ಗಾಯಗೊಂಡ ಘಟನೆ ಸೋಮವಾರ ( ಸೆ.26 ರಂದು) ನಡೆದಿದೆ.

Advertisement

ಚೆಂಬು ಗ್ರಾಮದ ಕುದುರೆಪಾಯ ನಿವಾಸಿ ತೇಜೇಶ್ವರ ಎಂಬವರ ಪುತ್ರ ಪ್ರತೀಕ್ ಮೃತ ಯುವಕ.

ತೇಜಸ್ ಎಂಬ ಯುವಕನ ಜೊತೆ ಬೈಕ್‌ನಲ್ಲಿ ಸುಳ್ಯಕ್ಕೆ ಬರುತ್ತಿದ್ದಾಗ ಸುಳ್ಯದ ಪರಿವಾರಕಾನದ ತಿರುವಿನಲ್ಲಿ ರಿಕ್ಷಾಕ್ಕೆ ಬೈಕ್ ಢಿಕ್ಕಿಯಾಗಿದೆ. ತೀವ್ರ ಗಾಯಗೊಂಡಿದ್ದ ಬೈಕ್ ಸವಾರರಿಬ್ಬರನ್ನು ಸ್ಥಳೀಯರು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಗಂಭೀರ ಗಾಯಗೊಂಡಿದ್ದ ಪ್ರತೀಕ್ ಮೃತಪಟ್ಟಿದ್ದಾರೆ. ಇನ್ನೋರ್ವ ಗಾಯಾಳು ತೇಜಸ್‌ ನನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.

ಸುಳ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next