Advertisement

ಶಾಶ್ವತ ನೀರಾವರಿ ಯೋಜನೆ, ರೈತರಿಂದ ಬೃಹತ್ ಬೈಕ್ ರಾಲಿ

01:43 PM Jun 01, 2017 | Harsha Rao |

ಚಿಕಬಳ್ಳಾಪುರ : ಶಾಶ್ವತ ನೀರಾವರಿ ಯೋಜನೆಯನ್ನು ಜಾರಿಗೊಳಿಸಲು ಆಗ್ರಹಿಸಿ ಚಿಕ್ಕಬಳ್ಳಾಪುರ ದೇವನಹಳ್ಳಿ, ಹಾಗೂ ಕೋಲಾರದ ರೈತರು ರಾಜ್ಯ ಸರಕಾರದ ವಿರುದ್ಧ ಬೃಹತ್ ಬೈಕ್ ರಾಲಿಯನ್ನು ನಡೆಸುತ್ತಿದ್ದಾರೆ. ಏತನ್ಮಧ್ಯೆ ಸರ್ಕಾರಕ್ಕೆ ಒಂದು ಗಂಟೆಗಳ ಗಡುವು ವಿಧಿಸಿದ್ದು, ಸರ್ಕಾರದ ಪ್ರತಿನಿಧಿಗಳು ರೈತರ ಜೊತೆ ಮಾತನಾಡಲು ಒಂದು ಗಂಟೆಗಳ ಗಡುವು ನೀಡಲಾಗಿದೆ ಎಂದು ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ತಿಳಿಸಿದ್ದಾರೆ.

Advertisement

ಚಿಕ್ಕಬಳ್ಳಾಪುರದಲ್ಲಿ ಬೃಹತ್ ಬೈಕ್ ರಾಲಿಗೆ ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಚಾಲನೆ ನೀಡಿದರು. ಸಾವಿರಾರು ರೈತರು ತಮ್ಮ ಬೈಕುಗಳಿಂದ ಚಿಕ್ಕಬಳ್ಳಾಪುರದಿಂದ ದೇವನಹಳ್ಳಿಗೆ ಬಂದು ಬೃಹತ್ ಪ್ರತಿಭಟನೆ ನಡೆಸಲು ಉದ್ದೇಶಿಸಿದ್ದಾರೆ ಎನ್ನಲಾಗಿದೆ. 

ಚಿಕ್ಕಬಳ್ಳಾಪುರ, ಕೋಲಾರ ಹಾಗೂ ದೇವನಹಳ್ಳಿಯಲ್ಲಿ ನೀರಿನ ಸಮಸ್ಯೆ ತಲೆದೋರಿರುವುದರಿಂದ ಶಾಶ್ವತ ನೀರಾವರಿ ಯೋಜನೆ ಜಾರಿಗೊಳಿಸಬೇಕೆಂದು ಸಾವಿರಾರು ರೈತರು ರಾಲಿಯಲ್ಲಿ ಪಾಲ್ಗೊಂಡಿದ್ದಾರೆ. ಇದರ ನಡುವೆ ದೇವನಹಳ್ಳಿಯಲ್ಲಿ ರಾಲಿಯನ್ನು ತಡೆಯಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆಂದು ತಿಳಿದುಬಂದಿದೆ. 

Advertisement

Udayavani is now on Telegram. Click here to join our channel and stay updated with the latest news.

Next