Advertisement

ಅವೈಜ್ಞಾನಿಕ ಪರೀಕ್ಷಾ ಪದ್ಧತಿ ರದ್ದತಿಗೆ ಆಗ್ರಹಿಸಿ ಬೈಕ್‌ ರ್ಯಾಲಿ

10:10 AM Mar 01, 2019 | Team Udayavani |

ದಾವಣಗೆರೆ: ಅವೈಜ್ಞಾನಿಕ ಪರೀಕ್ಷಾ ಪದ್ಧತಿಯನ್ನ ದಾವಣಗೆರೆ ವಿಶ್ವವಿದ್ಯಾಲಯ ರದ್ದುಪಡಿಸಬೇಕು ಎಂದು ಒತ್ತಾಯಿಸಿ ಗುರುವಾರ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿಗಳ ಒಕ್ಕೂಟ(ಎನ್‌ಎಸ್‌ಯುಐ) ನೇತೃತ್ವದಲ್ಲಿ ವಿದ್ಯಾರ್ಥಿಗಳು ಬೈಕ್‌ ರ್ಯಾಲಿ ನಡೆಸಿದರು.

Advertisement

ದಾವಣಗೆರೆ ವಿಶ್ವವಿದ್ಯಾಲಯಯ ಜಾರಿಗೊಳಿಸಿರುವ ಸರಿ-ಬೆಸ ಸೆಮಿಸ್ಟರ್‌ ಪದ್ಧತಿಯಿಂದ ವಿದ್ಯಾರ್ಥಿ ಸಮುದಾಯಕ್ಕೆ ಸಾಕಷ್ಟು ತೊಂದರೆ ಆಗುತ್ತಿದೆ. ಈಗಿನ ನಿಯಮದಂತೆ ಪ್ರಥಮ ಸೆಮಿಸ್ಟರ್‌ನಲ್ಲಿ ಫೇಲಾದವರು 2ನೇ ಸೆಮಿಸ್ಟರ್‌ನಲ್ಲಿ ಮರು ಪರೀಕ್ಷೆ ಬರೆಯುವಂತಿಲ್ಲ. 3ನೇ ಸೆಮಿಸ್ಟರ್‌ನಲ್ಲಿ ಬರೆಯಬೇಕು. ಇಂತಹ ಅವೈಜ್ಞಾನಿಕ ಪದ್ಧತಿಯನ್ನು ಈ ಕೂಡಲೇ ರದ್ದುಪಡಿಸಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸಿದರು.

ದಾವಣಗೆರೆ ವಿಶ್ವವಿದ್ಯಾಲಯ ಸೆಮಿಸ್ಟರ್‌ ಅಂಕಪಟ್ಟಿ ನೀಡಲು ವಿಳಂಬ ನೀತಿ ಅನುಸರಿಸುತ್ತಿದೆ. ಸಾಕಷ್ಟು ವಿದ್ಯಾರ್ಥಿಗಳಿಗೆ ಆಗುವ ತೊಂದರೆ ನಿವಾರಿಸುವ ಹಿನ್ನೆಲೆಯಲ್ಲಿ ಸಕಾಲದಲ್ಲಿ ಅಂಕಪಟ್ಟಿ ವಿತರಣೆಗೆ ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು. ಎನ್‌ಎಸ್‌ಯುಐ ರಾಜ್ಯ ಕಾರ್ಯದರ್ಶಿ ಮೊಹಮ್ಮದ್‌ ಮುಜಾಹಿದ್‌ ಪಾಷಾ, ಶಶಿಧರ್‌ ಪಾಟೀಲ್‌, ಎಚ್‌.ಎಂ. ಮನೋಜ್‌ಕುಮಾರ್‌ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next