Advertisement

ಆಮ್ನಿ ಢಿಕ್ಕಿ: ದ್ವಿಚಕ್ರ ವಾಹನ ಸವಾರ ಸಾವು

07:23 PM Oct 15, 2022 | Team Udayavani |

ಮಂಗಳೂರು: ಆಮ್ನಿ ಢಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ಆಕಾಶಭವನದ ಬಳಿ ಸಂಭವಿಸಿದೆ.

Advertisement

ಸದಾಖತ್‌ (40) ಮೃತಪಟ್ಟವರು. ಅವರು ಶುಕ್ರವಾರ ರಾತ್ರಿ 11 ಗಂಟೆಯ ಸುಮಾರಿಗೆ ಮಸೀದಿಯ ಕಾರ್ಯಕ್ರಮವೊಂದರಿಂದ ದ್ವಿಚಕ್ರ ವಾಹನದಲ್ಲಿ ವಾಪಸ್‌ ತೆರಳುತ್ತಿದ್ದಾಗ ಇಳಿಜಾರಿನಲ್ಲಿ ಹಿಂದಿನಿಂದ ಬಂದ ಆಮ್ನಿ ನಿಯಂತ್ರಣ ಕಳೆದುಕೊಂಡು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದು ಅನಂತರ ಆವರಣ ಗೋಡೆಗೆ ಢಿಕ್ಕಿ ಹೊಡೆಯಿತು. ದ್ವಿಚಕ್ರ ವಾಹನ ಅದರ ನಡುವೆ ಸಿಲುಕಿದ್ದರಿಂದ ಸವಾರ ಸದಾಖತ್‌ ಗಂಭೀರವಾಗಿ ಗಾಯಗೊಂಡರು. ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫ‌ಲಕಾರಿಯಾಗದೆ ಶನಿವಾರ ಮೃತಪಟ್ಟಿದ್ದಾರೆ.

ಸಂಚಾರ ಉತ್ತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next