Advertisement

Road mishap: ಶಂಭೂರು; ಬೈಕ್‌-ಸ್ಕೂಟರ್‌ ಢಿಕ್ಕಿ

07:29 PM Mar 14, 2024 | Team Udayavani |

ಬಂಟ್ವಾಳ: ಶಂಭೂರು ಶ್ರೀ ಷಣ್ಮುಖ ದೇವಸ್ಥಾನದ ದ್ವಾರದ ಬಳಿಯಲ್ಲಿ  ಬೈಕ್‌ ಹಾಗೂ ಸ್ಕೂಟರ್‌ ಢಿಕ್ಕಿ ಹೊಡೆದುಕೊಂಡ ಪರಿಣಾಮ ಎರಡೂ ವಾಹನಗಳ ನಾಲ್ವರು ಸವಾರರು ಗಾಯಗೊಂಡಿದ್ದಾರೆ.

Advertisement

ಸ್ಕೂಟರ್‌ ಸವಾರ ಮಂಗಳೂರು ಅಳಪೆ ನಿವಾಸಿ ಉದಯಕುಮಾರ್‌ ಅವರು ಸಂಬಂಧಿ ಸುಂದರ ಬಂಗೇರ ಅವರನ್ನು  ಕುಳ್ಳಿರಿಸಿಕೊಂಡು ಹೋಗುತ್ತಿದ್ದಾಗ ಎದುರಿನಿಂದ  ಬಂದ ಅಶ್ವತ್ಥ್ ಅವರು ಚಲಾಯಿಸುತ್ತಿದ್ದ ಬೈಕ್‌ ಢಿಕ್ಕಿ ಹೊಡೆದಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಘಟನೆಯಲ್ಲಿ ಎರಡು ಬೈಕ್‌ಗಳಲ್ಲಿದ್ದ ನಾಲ್ವರು ಗಾಯಗೊಂಡಿದ್ದು, ಸುಂದರ ಬಂಗೇರ ಅವರನ್ನು ಒಳರೋಗಿಯಾಗಿ ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿದೆ.  ಬಂಟ್ವಾಳ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next