Advertisement

ಬೈಕ್‌- ಸ್ಕೂಟಿ ಢಿಕ್ಕಿ: ಇಬ್ಬರ ಸಾವು

10:55 AM Jan 29, 2022 | Team Udayavani |

ಸಾಗರ: ನಗರದ ಆರ್‌ಎಂಸಿ ರಸ್ತೆಯಲ್ಲಿ ಶುಕ್ರವಾರ ಮಧ್ಯಾಹ್ನ 3 ಗಂಟೆಯ ಸುಮಾರಿಗೆ ನಡೆದ ರಸ್ತೆ ಅಪಘಾತದಲ್ಲಿ ಚಾರ್ಟೆಡ್‌ ಅಕೌಂಟೆಂಟ್‌ ರಾಜೇಶ್‌ ಎಸ್‌. (45) ಹಾಗೂ ಹರೀಶ್‌ ಮುಂಡಗೋಡು (24) ಮೃತಪಟ್ಟ ಘಟನೆ ನಡೆದಿದೆ.

Advertisement

ನಗರದ ಆರ್‌ಎಂಸಿ ರಸ್ತೆಯಲ್ಲಿರುವ ತಮ್ಮ ಮನೆಯಿಂದ ಸ್ಕೂಟಿಯಲ್ಲಿ ಹೊರಟಿದ್ದ ರಾಜೇಶ್‌ ಅವರಿಗೆ ಅದೇ ರಸ್ತೆಯಲ್ಲಿ ವೇಗವಾಗಿ ಬರುತ್ತಿದ್ದ ಬೈಕ್‌ ಮುಖಾಮುಖಿ ಢಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರಾಜೇಶ್‌ ಅವರ ತಲೆ ಭಾಗಕ್ಕೆ ಗಂಭೀರ ಸ್ವರೂಪದ ಗಾಯವಾಗಿ ಸ್ಥಳದಲ್ಲೇ ಮೃತಪಟ್ಟರೆ ಸ್ಕೂಟಿಯ ಹಿಂಭಾಗ ಕುಳಿತಿದ್ದ ಚಂದನ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಕಳಿಸಲಾಗಿದೆ. ಬೈಕ್‌ ಸವಾರ ಹರೀಶ್‌ಗೆ ಕೂಡ ತಲೆಗೆ ಬಲವಾದ ಪೆಟ್ಟು ಬಿದ್ದಿದ್ದು ಸರ್ಕಾರಿ ಆಸ್ಪತ್ರೆಗೆ ತರುವ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾರೆ.

ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಗರದಲ್ಲಿ ಕಳೆದ ಐದಾರು ವರ್ಷಗಳಿಂದ ಚಾರ್ಟೆಡ್‌ ಅಕೌಂಟೆಂಟ್‌ ಆಗಿ ಸೇವೆ ಸಲ್ಲಿಸುತ್ತಿದ್ದ ರಾಜೇಶ್‌ ಅವರು ಪತ್ನಿ, ಓರ್ವ ಪುತ್ರಿಯನ್ನು ಅಗಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next