Advertisement

ಇಬ್ಬರು ಪ್ರಯಾಣಿಸಿದರೆ ದ್ವಿಚಕ್ರ ವಾಹನ ಜಪ್ತಿ

01:49 PM Apr 17, 2020 | Suhan S |

ಹುಬ್ಬಳ್ಳಿ: ಧಾರವಾಡ ಜಿಲ್ಲೆಯನ್ನು ಕ್ಲಸ್ಟರ್‌ ಹಾಟ್‌ಸ್ಪಾಟ್‌ ಎಂದು ಘೋಷಿಸಿದೆ. ಈ ಹಿನ್ನೆಲೆಯಲ್ಲಿ ದ್ವಿಚಕ್ರ ವಾಹನದಲ್ಲಿ ಒಬ್ಬರಿಗಿಂತ ಹೆಚ್ಚು ಜನರು ಪ್ರಯಾಣಿಸುವಂತಿಲ್ಲ. ಒಂದು ವೇಳೆ ಹೆಚ್ಚಿನ ಜನರು ಪ್ರಯಾಣಿಸಿದರೆ ಅಂಥವರನ್ನು ಪೊಲೀಸರು ತಡೆದು ವಾಹನ ಜಫ್ತು ಮಾಡಲಿದ್ದಾರೆ.

Advertisement

ಕೋವಿಡ್ 19 ವೈರಸ್‌ ವ್ಯಾಪಿಸುತ್ತಿರುವುದನ್ನು ತಡೆಗಟ್ಟುವನಿಟ್ಟಿನಲ್ಲಿ ಪೊಲೀಸ್‌ ಇಲಾಖೆ ಹು-ಧಾ ಅವಳಿ ನಗರದಲ್ಲಿ ಇನ್ನಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಅನಗತ್ಯವಾಗಿ ತಿರುಗಾಡುವ ವಾಹನ ಸವಾರರ ಮೇಲೆ ಹೆಚ್ಚಿನ ನಿಗಾ ವಹಿಸಲಾಗಿದೆ. ಕಾರು, ದ್ವಿಚಕ್ರ ವಾಹನ ಸೇರಿದಂತೆ ಇನ್ನಿತರೆ ವಾಹನ ಸವಾರರು ತುರ್ತು ಸಂದರ್ಭ ಹೊರತುಪಡಿಸಿ ಇನ್ನುಳಿದ ವೇಳೆ ಅನಗತ್ಯ ತಿರುಗುವ ವಾಹನಗಳನ್ನು ಜಫ್ತು ಮಾಡಲಾಗುವುದು. ಅಲ್ಲದೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಂಚಾರ ಎಸಿಪಿ ಎಸ್‌.ಎಂ. ಸಂದಿಗವಾಡ “ಉದಯವಾಣಿ’ಗೆ ತಿಳಿಸಿದರು

Advertisement

Udayavani is now on Telegram. Click here to join our channel and stay updated with the latest news.

Next