Advertisement

ಸ್ಮಾರ್ಟ್ ಸಿಟಿ ಗುಂಡಿಗೆ ಬಿದ್ದ ಬೈಕ್: ಪವಾಡ ಸದೃಶ ರೀತಿಯಲ್ಲಿ ಪಾರಾದ ಸವಾರ

12:35 PM Jan 07, 2022 | keerthan |

ಶಿವಮೊಗ್ಗ: ಇಲ್ಲಿನ ಜೈಲ್ ರಸ್ತೆಯಲ್ಲಿ ಸ್ಮಾರ್ಟ್ ಸಿಟಿ ಯೋಜನೆಗೆ ಅಗಿಯಲಾದ ಗುಂಡಿಗೆ ಬೈಕ್ ಬಿದ್ದ ಘಟನೆ ಗುರುವಾರ ತಡರಾತ್ರಿ ನಡೆದಿದೆ. ಆದರೆ ಬೈಕ್ ಸವಾರ ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾರೆ.

Advertisement

ಸ್ಮಾರ್ಟ್ ಸಿಟಿ ಕಾಮಗಾರಿ ಹಿನ್ನೆಲೆಯಲ್ಲಿ ಎಲ್ಲೆಂದರಲ್ಲಿ ಗುಂಡಿ ತೆಗೆಯಲಾಗಿದೆ. ಆದರೆ ತೆಗೆದ ಗುಂಡಿಗಳ ಸುತ್ತ ಬ್ಯಾರಿಕೇಡ್ ಅಳವಡಿಸುವ ಕೆಲಸ ಮಾಡಿಲ್ಲ. ಹೀಗಾಗಿ ಜೈಲ್ ರಸ್ತೆಯಲ್ಲಿ ಬಂದ ಬೈಕ್ ಸವಾರನಿಗೆ ರಸ್ತೆಯಲ್ಲಿದ್ದ ಗುಂಡಿ ಕಾಣಿಸಿದೆ, ಬೈಕ್‌ ನೇರವಾಗಿ ಗುಂಡಿಗೆ ಬಿದ್ದಿದೆ.

ಇದನ್ನೂ ಓದಿ:ಮೋದಿಯವರೇ ಪ್ರತಿಭಟನಾಕಾರರು ಇರುವ ಮಾರ್ಗವನ್ನೇ ಆರಿಸಿಕೊಂಡಿದ್ಯಾಕೆ?: ದಿನೇಶ್ ಗುಂಡೂರಾವ್

ಬೈಕ್ ಸವಾರ ಬೈಕ್ ಬಿಟ್ಟು ಹಾರಿದ್ದರಿಂದ ಆತ ಗುಂಡಿಗೆ ಬೀಳದೆ ಪಾರಾಗಿದ್ದಾನೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next