Advertisement

ನೆಲಮಂಗಲ: ಮೂರು ಜಿಲ್ಲೆಗಳಲ್ಲಿ ಕೈಚಳಕ ತೋರಿದ ಖತರ್ನಾಕ್ ಬೈಕ್ ಕಳ್ಳ ಪೊಲೀಸ್ ಖೆಡ್ಡಾಗೆ

11:06 AM Mar 02, 2022 | Team Udayavani |

ನೆಲಮಂಗಲ: ಮೂರು ಜಿಲ್ಲೆಗಳಲ್ಲಿ ಬೈಕ್ ಕಳ್ಳತನ ಮಾಡಿ ಎಸ್ಕೇಪ್ ಆಗ್ತಾ ಇದ್ದ ಖತರ್ನಾಕ್ ಬೈಕ್ ಕಳ್ಳನನ್ನು ನೆಲಮಂಗಲ ಟೌನ್ ಪೊಲೀಸರು ಬಂಧಿಸಿದ್ದಾರೆ.

Advertisement

ಕೆ.ಆರ್.ಪೇಟೆ ತಾಲೂಕಿನ ಕಿಕ್ಕೇರಿಯ ನಿವಾಸಿ ಡಿ.ಎಸ್.ಸುನೀಲ್ ಬಂಧಿತ ಆರೋಪಿ.

ಬೆಂಗಳೂರು, ಹಾಸನ, ಮೈಸೂರು ಜಿಲ್ಲೆಗಳಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ ಖದೀಮ ತನ್ನ ಕೈಚಳಕದಿಂದ ಬೈಕ್ ಕದಿಯುತ್ತಿದ್ದ. ಬಂಧಿತ ಆರೋಪಿಯಿಂದ 11 ಬೈಕ್ ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ನೆಲಮಂಗಲ ಟೌನ್ ಪೊಲೀಸ್ ಇನ್ಸ್ಪೆಕ್ಟರ್ ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಖತರ್ನಾಕ್ ಕಳ್ಳನನ್ನು ಬಂಧಿಸಿ ಪರಪ್ಪನ ಅಗ್ರಹಾರಕ್ಕೆ ಕಳುಹಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next