Advertisement

ಕುಷ್ಟಗಿ: ಟಿಪ್ಪರ್ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ

07:08 PM Dec 30, 2021 | Team Udayavani |

ಕುಷ್ಟಗಿ: ಇಲ್ಲಿನ ಎಸ್.ಬಿ. ಪೆಟ್ರೋಲ್ ಬಂಕ್ ಬಳಿ ಟಿಪ್ಪರ್ ಢಿಕ್ಕಿಯಾಗಿ ಬೈಕ್ ನಲ್ಲಿದ್ದ ಯುವಕ ದುರ್ಮರಣಕ್ಕೀಡಾದ ಘಟನೆ ಗುರುವಾರ ನಡೆದಿದೆ.

Advertisement

ನಿಂಗನಗೌಡ ಸಿದ್ದನಗೌಡ ಪಾಟೀಲ (27) ಮೃತ ದುರ್ದೈವಿ. ಟ್ರಾಕ್ಟರ್ ಚಾಲಕನಾಗಿದ್ದ ಯುವಕ ಬೈಕಿನಲ್ಲಿ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ-50, ಯ ಸರ್ವಿಸ್ ರಸ್ತೆಯಲ್ಲಿ ಕುಷ್ಟಗಿಗೆ ಬರುತ್ತಿದ್ದಾಗ,ಟಿಪ್ಪರ್ ಢಿಕ್ಕಿಯಾಗಿ ಯುವಕ ಸ್ಥಳದಲ್ಲೆ ಮೃತ ಪಟ್ಟಿದ್ದಾನೆ. ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುಷ್ಟಗಿಯ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಮೇಲ್ಸೇತುವೆ ದುರಸ್ಥಿಯಲ್ಲಿದ್ದು, ಹೀಗಾಗಿ ಎಲ್ಲಾ ವಾಹನಗಳು ಕುಷ್ಟಗಿ ಸರ್ವಿಸ್ ರಸ್ತೆಯಲ್ಲಿ ಸಂಚರಿಸುತ್ತಿದ್ದು ವಾಹನ ದಟ್ಟನೆ ಹೆಚ್ಚಿದೆ. ಈ ಕಾರಣದಿಂದ ಅಪಘಾತ ಸಂಭವಿಸುತ್ತಿರುವುದಕ್ಕೆ ಸ್ಥಳೀಯರು ಅಕ್ರೋಶ ವ್ಯಕ್ತ ಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next