Advertisement

ರವಿಶಂಕರ್‌ ಗುರೂಜಿ ಆಶ್ರಮದ ಬೈಕ್‌ಗಳಿಗೆ ಬೆಂಕಿ

03:12 PM May 02, 2023 | Team Udayavani |

ರಾಮನಗರ: ಕಾಂಪೌಂಡ್‌ ನಿರ್ಮಿಸುವ ವಿಚಾರಕ್ಕೆ ಸಂಬಂ ಧಿಸಿದಂತೆ ಸ್ಥಳೀಯ ಗ್ರಾಮಸ್ಥರು ಮತ್ತು ರವಿಶಂಕರ್‌ ಗುರೂಜಿ ಆಶ್ರಮದ ಕಡೆಯವರ ನಡುವೆ ಗಲಾಟೆ ನಡೆದು ಆಶ್ರಮಕ್ಕೆ ಸೇರಿದ್ದ ಬೈಕ್‌ ಮತ್ತು ಕಾರುಗಳನ್ನು ಹಾನಿಗೊಳಿಸಿರುವ ಘಟನೆ ಕಗ್ಗಲೀಪುರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ರಾತ್ರಿ ನಡೆದಿದೆ.

Advertisement

ಘಟನೆಯಲ್ಲಿ ರವಿಶಂಕರ್‌ ಗುರೂಜಿ ಆಶ್ರಮಕ್ಕೆ ಸೇರಿದ 7 ಬೈಕ್‌ಗಳು ಸಂಪೂರ್ಣ ಸುಟ್ಟು ಕರಕಲಾಗಿದ್ದು, 5 ಬೈಕ್‌ಗಳು ಮತ್ತು ನಾಲ್ಕು ಕಾರುಗಳಿಗೆ ಹಾನಿಯಾಗಿದೆ. ಇನ್ನು ಆಶ್ರಮದ ಭದ್ರತಾ ಕೊಠಡಿಯ ಗಾಜುಗಳು ಪುಡಿಪುಡಿಯಾಗಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣಗೊಂಡಿದೆ.

ಘಟನೆಯ ವಿವರ: ಬೆಂಗಳೂರು ದಕ್ಷಿಣ ತಾಲೂಕಿನ ವಡೇರಹಳ್ಳಿ ಬಳಿ ಇರುವ ರವಿಶಂಕರ್‌ ಗುರೂಜಿ ಅವರ ಆರ್ಟ್‌ ಆಫ್‌ ಲೀವಿಂಗ್‌ ಹಾಗೂ ಸ್ಥಳೀಯ ಗ್ರಾಮಸ್ಥರ ನಡುವೆ 36 ಗುಂಟೆ ಭೂಮಿಗೆ ಸಂಬಂಧಿಸಿದಂತೆ ವಿವಾದ ಇತ್ತು. ಈ ಭೂಮಿಗೆ ಆಶ್ರಮದ ಸಿಬ್ಬಂದಿ ಕಾಂಪೌಂಡ್‌ ನಿರ್ಮಿಸಲು ಮುಂದಾದ ಹಿನ್ನೆಲೆಯಲ್ಲಿ ಕುಪಿತಗೊಂಡ ಗ್ರಾಮಸ್ಥರು ಗಲಾಟೆ ಮಾಡಿ ಆಶ್ರಮದ ಆವರಣದಲ್ಲಿ ಇದ್ದ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ.

ಘಟನೆಯ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣಗೊಂಡಿದ್ದು, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸೇರಿದಂತೆ ಹಿರಿಯ ಪೊಲೀಸ್‌ ಅಧಿಕಾರಿಗಳು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ. ರಾಮನಗರ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next