Advertisement

Road Mishap ಬಿಳಿನೆಲೆ: ಬಸ್‌ ಢಿಕ್ಕಿ; ಬೈಕ್‌ ಸವಾರ ಸಾವು

12:07 AM Feb 20, 2024 | Team Udayavani |

ಸುಬ್ರಹ್ಮಣ್ಯ: ಬೈಕ್‌ಗೆ ಕೆಎಸ್ಸಾರ್ಟಿಸಿ ಬಸ್‌ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಬೈಕ್‌ ಸವಾರ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಿಳಿನೆಲೆಲ್ಲಿ ಸೋಮವಾರ ಸಂಭವಿಸಿದೆ.

Advertisement

ಕೊಂಬಾರು ಮಣಿಭಾಂಡ ತೇರೆಬೀದಿ ನಿವಾಸಿ ನೆಟ್ಟಣದಲ್ಲಿ ಮೆಕ್ಯಾನಿಕ್‌ ಆಗಿದ್ದ ವಾಸುದೇವ ಗೌಡ (52) ಮೃತಪಟ್ಟವರು. ಮೃತರು ಪತ್ನಿ, ಇಬ್ಬರು ಪುತ್ರಿಯರು, ಪುತ್ರ ಹಾಗೂ ನಾಲ್ವರು ಸಹೋದರರನ್ನು ಅಗಲಿದ್ದಾರೆ.

ಬಸ್‌ ಓವರ್‌ಟೇಕ್‌ ಮಾಡುವ ಭರದಲ್ಲಿ ಎದುರಿನಿಂದ ಬಂದ ಬೈಕ್‌ಗೆ ಢಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡ ವಾಸುದೇವ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟರು ಎಂದು ತಿಳಿದುಬಂದಿದೆ.

ಕಡಬ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next