Advertisement

ಬಿಲ್ಲವರ ಅಸೋಸಿಯೇಶನ್‌ ನವರಾತ್ರಿ,ದಾಂಡಿಯಾ

04:45 PM Sep 26, 2017 | Team Udayavani |

ಮುಂಬಯಿ: ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಇದರ ಮಹಿಳಾ ವಿಭಾಗವು ವಾರ್ಷಿಕವಾಗಿ ಆಚರಿಸುವ ಲಲಿತ ಸಹಸ್ರ-ಕುಂಕುಮಾರ್ಚನೆ, “ದಾಂಡಿಯಾ ರಾಸ್‌’ ಕಾರ್ಯಕ್ರಮವು ಸೆ. 23ರಂದು ಅಪರಾಹ್ನ ಸಾಂತಾಕ್ರೂಜ್‌ ಪೂರ್ವದ ಬಿಲ್ಲವ ಭವನದಲ್ಲಿ ನಡೆಯಿತು.

Advertisement

ವಿಶೇಷ ಆಮಂತ್ರಿತರಾಗಿದ್ದ ಬಿಲ್ಲವರ ಅಸೋಸಿಯೇಶನ್‌ ಅಧ್ಯಕ್ಷ  ನಿತ್ಯಾನಂದ ಡಿ.ಕೋಟ್ಯಾನ್‌ ಅವರ ಅಧ್ಯಕ್ಷತೆ ಹಾಗೂ ರಾಷ್ಟ್ರೀಯ ಬಿಲ್ಲವ ಮಹಾ ಮಂಡಲದ ಅಧ್ಯಕ್ಷ ಜಯ ಸಿ. ಸುವರ್ಣರ ಮಾರ್ಗದರ್ಶನ ಮತ್ತು ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶಕುಂತಳಾ ಕೆ. ಕೋಟ್ಯಾನ್‌ ಸಾರಥ್ಯದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಯಮಿ ಹಾಗೂ ಸಮಾಜ ಸೇವಕಿ ಶಾರದಾ ಸೂರು ಕರ್ಕೇರ ಮತ್ತು ಭಾರತ್‌ ಬ್ಯಾಂಕಿನ ಉಪ ಕಾರ್ಯಧ್ಯಕ್ಷೆ ನ್ಯಾಯವಾದಿ  ರೋಹಿಣಿ ಜೆ. ಸಾಲ್ಯಾನ್‌ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು.

ಅಸೋಸಿಯೇಶನ್‌ನ ಉಪಾಧ್ಯಕ್ಷರಾದ ಭಾಸ್ಕರ ವಿ. ಬಂಗೇರ, ಡಾ| ಯು. ಧನಂಜಯ ಕುಮಾರ್‌, ಗೌರವ ಪ್ರಧಾನ ಕಾರ್ಯದರ್ಶಿ ಧರ್ಮಪಾಲ ಜಿ. ಅಂಚನ್‌, ಗೌರವ ಪ್ರಧಾನ  ಕೋಶಾಧಿಕಾರಿ ಮಹೇಶ್‌ ಸಿ. ಕಾರ್ಕಳ, ಯುವಾಭ್ಯುದಯ ಸಮಿತಿಯ ಮುಖ್ಯಸ್ಥ ನಿಲೇಶ್‌ ಪೂಜಾರಿ ಪಲಿಮಾರ್‌, ಹಿರಿಯ ಮುಂದಾಳು ಶ್ರೀನಿವಾಸ ಆರ್‌. ಕರ್ಕೇರ ವಿಶೇಷವಾಗಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಶಶಿ ನಿತ್ಯಾನಂದ್‌ ಕೋಟ್ಯಾನ್‌, ಸುಧಾ ಎಲ್‌. ವಿ. ಅಮೀನ್‌, ಜಯಂತಿ ವಿ. ಉಳ್ಳಾಲ್‌, ಅಸೋಸಿಯೇಶನ್‌ನ ಗೌರವ ಜೊತೆ ಕಾರ್ಯದರ್ಶಿಗಳಾದ ಹರೀಶ್‌ ಜಿ. ಸಾಲ್ಯಾನ್‌, ಆಶಾಲತಾ ಕೋಟ್ಯಾನ್‌,  ಮಹಿಳಾ ವಿಭಾಗದ ಉಪಾಧ್ಯಕ್ಷೆಯರಾದ ಪ್ರಭಾ ಕೆ. ಬಂಗೇರ, ವಿಲಾಸಿನಿ ಕೆ. ಸಾಲ್ಯಾನ್‌, ಯಶೋದಾ ಎನ್‌. ಟಿ. ಪೂಜಾರಿ, ಜತೆ ಕಾರ್ಯದರ್ಶಿಗಳಾದ 
ಡಾ| ಗೀತಾಂಜಲಿ ಎಲ್‌. ಸಾಲ್ಯಾನ್‌, ಲಕ್ಷ್ಮೀ ಎಸ್‌. ಪೂಜಾರಿ, ವಿಶೇಷ ಆಮಂತ್ರಿತ ಸದಸ್ಯೆಯರಾದ ಭವಾನಿ ಸಿ. ಕೋಟ್ಯಾನ್‌, ವನಿತಾ ಎ. ಪೂಜಾರಿ, ಪೂಜಾ ಪುರುಷೋತ್ತಮ್‌ ಕೋಟ್ಯಾನ್‌,  ಪ್ರಭಾ ಎನ್‌. ಪಿ. ಸುವರ್ಣ ಮತ್ತಿತರರು ಪಾಲ್ಗೊಂಡಿದ್ದರು. ರಾಘವ ಅಮೀನ್‌ ಮತ್ತು ತಂಡದವರಿಂದ ಭಜನ ಕಾರ್ಯಕ್ರಮ ನಡೆಯಿತು. ಅಸೋಸಿಯೇಶನ್‌ನ ಕಾರ್ಯಕಾರಿ ಸಮಿತಿಯ ಸದಸ್ಯರು, 
ಸ್ಥಳೀಯ ಸಮಿತಿಗಳ ಮುಖ್ಯಸ್ಥರು, ಸದಸ್ಯರು, ಮಹಿಳಾ ಸದಸ್ಯೆಯರು ಸೇರಿದಂತೆ  ನೂರಾರು ಮಹಿಳೆಯರು  ದಾಂಡಿಯಾ ರಾಸ್‌ ಕಾರ್ಯಕ್ರಮದಲ್ಲಿ  ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next