Advertisement

ಇನ್ನು ಪರಿಸರಸ್ನೇಹಿ ಬ್ಯಾಗ್‌ನಲ್ಲಿ ತಿರುಪತಿ ಲಡ್ಡು!

09:42 PM Aug 22, 2021 | Team Udayavani |

ತಿರುಪತಿ: ಜಗತ್ಪ್ರಸಿದ್ಧ ತಿರುಮಲ ತಿರುಪತಿಯಲ್ಲಿ ನೀಡಲಾಗುವ ಲಡ್ಡು ಪ್ರಸಾದದ ವಿಲೇವಾರಿಗಾಗಿ ಪರಿಸರ ಸ್ನೇಹಿ ಬ್ಯಾಗ್‌ಗಳನ್ನು ಭಾರತದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ತಯಾರಿಸಿದೆ.

Advertisement

ಹೊಸ ಬ್ಯಾಗ್‌ಗಳಲ್ಲಿ ಲಡ್ಡು ವಿತರಿಸುವ ಕೌಂಟರ್‌ ಅನ್ನು ಭಾನುವಾರ ಡಿಆರ್‌ಡಿಒ ಮುಖ್ಯಸ್ಥ ಸತೀಶ್‌ ರೆಡ್ಡಿ ಹಾಗೂ ತಿರುಮಲ ತಿರುಪತಿ ದೇವಸ್ಥಾನಂ ಟ್ರಸ್ಟ್‌ (ಟಿಟಿಡಿ) ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಎಸ್‌. ಜವಾಹರ್‌ ರೆಡ್ಡಿ, ಜಂಟಿಯಾಗಿ ಉದ್ಘಾಟಿಸಿದರು.

ಇದನ್ನೂ ಓದಿ:ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್‌ ಏಷ್ಯಾ ಪ್ರವಾಸ ಆರಂಭ

ಸಾಂಪ್ರದಾಯಿಕವಾಗಿ ಬಳಸಲಾಗುವ ಪ್ಲಾಸ್ಟಿಕ್‌ ಬ್ಯಾಗ್‌ಗಳು, ಪೆಟ್ರೋಕೆಮಿಕಲ್ಸ್‌ನಿಂದ ತಯಾರಿಸಲ್ಪಟ್ಟಿರುತ್ತವೆ. ಅವು ಆರೋಗ್ಯಕ್ಕೆ ಹಾನಿಕಾರಕ. ಅಂಥ ಬ್ಯಾಗ್‌ಗಳು ಮಣ್ಣಿನಲ್ಲಿ ಕೊಳೆಯಲು 200ಕ್ಕೂ ಹೆಚ್ಚು ವರ್ಷಗಳನ್ನು ತೆಗೆದುಕೊಳ್ಳುತ್ತವೆ. ಆದರೆ, ಡಿಆರ್‌ಡಿಒ ತಯಾರಿಸಿರುವ ಬ್ಯಾಗ್‌ಗಳು, ಆರೋಗ್ಯಕ್ಕೆ ಹಾನಿಕಾರವಲ್ಲ. ಮಣ್ಣಿನಲ್ಲಿ ಬೇಗನೇ ಕೊಳೆಯುತ್ತವೆ. ಅಲ್ಲದೆ, ಇವುಗಳ ತಯಾರಿಕಾ ವೆಚ್ಚವೂ ಕಡಿಮೆ ಎಂದು ಸತೀಶ್‌ ರೆಡ್ಡಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next