Advertisement

ಬಿರ್‌ಭೂಮ್‌ ಹಿಂಸಾಚಾರ : ಸ್ವತಂತ್ರ ಸಿಬಿಐ ತನಿಖೆಗೆ ಕಲ್ಕತ್ತಾ ಹೈಕೋರ್ಟ್ ಆದೇಶ

12:41 PM Mar 25, 2022 | Team Udayavani |

ಕೋಲ್ಕತಾ: ಕನಿಷ್ಠ 8 ಜನರನ್ನು ಕೊಂದ ಬಿರ್‌ಭೂಮ್‌ ಹಿಂಸಾಚಾರ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿ ಸ್ವತಂತ್ರ ಸಿಬಿಐ ತನಿಖೆಗೆ ಕಲ್ಕತ್ತಾ ಹೈಕೋರ್ಟ್ ಶುಕ್ರವಾರ ಆದೇಶಿಸಿದೆ. ನ್ಯಾಯಾಲಯದ ಆದೇಶದಂತೆ ಸಿಬಿಐ ಏಪ್ರಿಲ್ 7 ರೊಳಗೆ ವರದಿ ಸಲ್ಲಿಸಬೇಕಿದೆ.

Advertisement

ಕೇಂದ್ರ ತನಿಖಾ ಸಂಸ್ಥೆಯಿಂದ ಪ್ರಕರಣದ ಸ್ವತಂತ್ರ ತನಿಖೆಯನ್ನು ಕೋರಿ ಸಲ್ಲಿಸಿದ್ದ ಪಿಐಎಲ್ ವಿಚಾರಣೆ ನಡೆಸಿದ ನಂತರ ನ್ಯಾಯಾಲಯ ಈ ತೀರ್ಪು ನೀಡಿದೆ.

ಪಶ್ಚಿಮ ಬಂಗಾಳದಲ್ಲಿ ಭಾರೀ ರಾಜಕೀಯ ಕೋಲಾಹಲವನ್ನು ಸೃಷ್ಟಿಸಿರುವ ಬಿರ್‌ಭೂಮ್‌ ಘಟನೆಯು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ರಾಜೀನಾಮೆಯನ್ನು ಕೋರಿ ಕಾನೂನು ಸುವ್ಯವಸ್ಥೆಯ ಪರಿಸ್ಥಿತಿಯ ಕುರಿತು ಬಂಗಾಳ ಸರ್ಕಾರವನ್ನು ಭಾರತೀಯ ಜನತಾ ಪಕ್ಷ ಬಿಜೆಪಿ ಒತ್ತಾಯಿಸಿ, ಕೇಂದ್ರ ಏಜೆನ್ಸಿಗಳಿಂದ ತನಿಖೆಗೆ ಆಗ್ರಹಿಸಿತ್ತು.

ಪ್ರಕರಣಕ್ಕೆ ಸಂಬಂಧಿಸಿ ಟಿಎಂಸಿಯ ಬ್ಲಾಕ್‌ ಅಧ್ಯಕ್ಷ ಅನಿರುಲ್‌ ಹೊಸ್ಸಾಯಿನ್‌ ರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ. ಘಟನೆ ನಡೆದ ದಿನದಂದು ಅನಿರುಲ್‌ ಅದೇ ಪ್ರದೇಶದಲ್ಲಿ ತಿರುಗಿದ್ದಾಗಿ ಹೇಳಲಾಗಿದ್ದು, ಘಟನೆಯಲ್ಲಿ ಆತನ ಕೈವಾಡವಿದೆ ಎಂದು ಮೃತರ ಕುಟುಂಬಸ್ಥರು ದೂರಿದ್ದರು. ಬಿರ್‌ಭೂಮ್‌ಗೆ ಭೇಟಿ ನೀಡಿದ ಮಮತಾ ಬ್ಯಾನರ್ಜಿ ಅವರೂ ಅನಿರುಲ್‌ಗೆ ಪೊಲೀಸರೆದುರು ಶರಣಾಗುವಂತೆ ಸೂಚಿಸಿದ್ದರು. ಆತ ತಾರಾಪಿತ್‌ನ ಹೊಟೇಲ್‌ ಒಂದರಲ್ಲಿ ಅಡಗಿ ಕುಳಿತಿದ್ದಾಗಿ ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next