Advertisement

Madikeri ತಿತಿಮತಿಯಲ್ಲಿ ಕಾಡುಕೋಣ ದಾಳಿ: ವ್ಯಕ್ತಿಗೆ ಗಂಭೀರ ಗಾಯ

12:36 AM Aug 19, 2024 | Team Udayavani |

ಮಡಿಕೇರಿ: ಕಾಡುಕೋಣವೊಂದು ದಾಳಿ ಮಾಡಿದ ಪರಿಣಾಮ ಹಾಡಿ ನಿವಾಸಿಯೊಬ್ಬರು ಗಾಯಗೊಂಡಿರುವ ಘಟನೆ ತಿತಿಮತಿ ಸಮೀಪದ ಬೊಗ್ಗನ ಹಡ್ಲುವಿನಲ್ಲಿ ಸಂಭವಿಸಿದೆ.

Advertisement

ಜೇನುಕುರುಬರ ತಿಮ್ಮ (45) ಕಾಡುಕೋಣದ ದಾಳಿಗೆ ತುತ್ತಾದವರು. ಅವರು ಎಂದಿನಂತೆ ಮನೆ ಸಮೀಪ ಕೆಲಸ ಮಾಡುತ್ತಿದ್ದ ಸಂದರ್ಭ ಏಕಾಏಕಿ ಕಾಡುಕೋಣ ದಾಳಿ ಮಾಡಿದೆ. ಕೊಂಬಿನಿಂದ ತಿವಿದ ಪರಿಣಾಮ ಎಡಗಾಲಿಗೆ ಗಂಭೀರ ಗಾಯವಾಗಿದೆ.

ಅವರನ್ನು ಮಡಿಕೇರಿಯ ಜಿಲ್ಲಾಸ್ಪತ್ರೆಗೆ ದಾಖಲಿಸ ಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ
ನೀಡಿ ಪರಿಶೀಲಿಸಿದರು. ರಾಜ್ಯ ವನ್ಯಜೀವಿ ಸಂರಕ್ಷಣ ಸಮಿತಿ ಸದಸ್ಯ ಸಂಕೇತ್‌ ಪೂವಯ್ಯ ಅವರು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಗಾಯಾಳುವಿನ ಯೋಗ ಕ್ಷೇಮ ವಿಚಾರಿಸಿದರು.

ಅನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಡುಕೋಣ ದಾಳಿ ಕುರಿತು ಕ್ಷೇತ್ರದ ಶಾಸಕ ಎಸ್‌. ಪೊನ್ನಣ್ಣ ಅವರ ಗಮನಕ್ಕೆ ತರಲಾಗಿದೆ. ಗಾಯಾಳುವಿಗೆ ಸೂಕ್ತ ಚಿಕಿತ್ಸೆ ದೊರಕಿಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಹಾಗೂ ವೈದ್ಯರಿಗೆ ಶಾಸಕರು ಸೂಚಿಸಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next