Advertisement

ಮೂಡುಬಿದಿರೆ:ಅಸ್ವಸ್ಥಗೊಂಡ ಸ್ಥಿತಿಯಲ್ಲಿ ಕಾಡುಕೋಣ ಪ್ರತ್ಯಕ್ಷ! ಅರಣ್ಯ ಇಲಾಖೆಯಿಂದ ಚಿಕಿತ್ಸೆ

09:54 AM Jun 17, 2020 | sudhir |

ಮೂಡುಬಿದಿರೆ : ಮೂಡುಬಿದಿರೆ ಪರಿಸರದಲ್ಲಿ ಅಸ್ವಸ್ಥಗೊಂಡ ರೀತಿಯಲ್ಲಿ ಕಾಡುಕೋಣವೊಂದು ಪ್ರತ್ಯಕ್ಷವಾದ ಘಟನೆ ಮಂಗಳವಾರ ರಾತ್ರಿ 9.30ರ ಸುಮಾರಿಗೆ ಕಲ್ಲಬೆಟ್ಟು ಗಂಟಾಲ್ಕಟ್ಟೆ ಚರ್ಚ್ ಬಳಿ ನಡೆದಿದೆ.

Advertisement

ಪುರಸಭಾ ವ್ಯಾಪ್ತಿಯಲ್ಲಿ ಕರಿಂಜೆ ಗ್ರಾಮದ ಕರಿಂಜೆಗುತ್ತು ಪರಿಸರದಲ್ಲಿ ಮಂಗಳವಾರ ಬೆಳಿಗ್ಗೆ ಕಾಣಿಸಿಕೊಂದಿತ್ತು ತಕ್ಷಣ ಸ್ಥಳೀಯರು ಅರಣ್ಯ ಇಲಾಖಾ ಅಧಿಕಾರಿಗಳಿಗೆ ಸುದ್ದಿ ಮುಟ್ಟಿಸಿದ್ದು, ಸ್ಥಳಕ್ಕೆ ಬಂದ ಅರಣ್ಯ ಇಲಾಖಾ ಅಧಿಕಾರಿಗಳು ದಿನವಿಡೀ ಹುಡುಕಾಡಿದರು ಸಿಗಲಿಲ್ಲ ರಾತ್ರಿ ಸುಮಾರು 9.30ರ ವೇಳೆಗೆ ಕಲ್ಲಬೆಟ್ಟು ಗಂಟಾಲ್ಕಟ್ಟೆ ಚರ್ಚ್ ಬಳಿ ಅಸ್ವಸ್ಥಗೊಂಡ ರೀತಿಯಲ್ಲಿ ಗೋಚರಿಸಿತು.

ಎಳೆಯ ಹರೆಯದ ಈ ಕಾಡುಕೋಣವು ನಾಲಗೆ ಹೊರಚಾಚಿಕೊಂಡು ತೀರಾ ಅಶಕ್ತ ಸ್ಥಿತಿಯೊಂದಿಗೆ ಅಲೆದಾಡುವಂತಿತ್ತು. ಕೂಡಲೇ ಕಾರ್ಯಪ್ರವೃತ್ತರಾದ ಅರಣ್ಯ ಇಲಖೆ ಕಾಡುಕೋಣವನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಅಸ್ವಸ್ಥಗೊಂಡ ಕಾಡುಕೋಣಕ್ಕೆ ಚಿಕಿತ್ಸೆ ನೀಡಲಾಗುತ್ತಿದ್ದು ಬಳಿಕ ಕಾಡುಕೋಣವನ್ನು ಅರಣ್ಯಕ್ಕೆ ಬಿಡಲಾಗುವುದೆಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next