Advertisement

ಬಿಸಿಯೂಟ: ಅನುದಾನ ಬಿಡುಗಡೆ- ಸರಕಾರದ ಗಮನ ಸೆಳೆದಿದ್ದ ಉದಯವಾಣಿ

12:55 AM Oct 19, 2023 | Team Udayavani |

ಬೆಂಗಳೂರು: ಸರಕಾರಿ, ಅನುದಾನಿತ ಶಾಲೆಗಳ 1ರಿಂದ 8ನೇ ತರಗತಿ ಮಕ್ಕಳಿಗೆ 2023- 24ನೇ ಸಾಲಿನ ಮಧ್ಯಾಹ್ನದ ಬಿಸಿಯೂಟ ಯೋಜನೆಯ ಮೊದಲ ತ್ತೈಮಾಸಿಕದ ಅನುದಾನವನ್ನು ಕೊನೆಗೂ ರಾಜ್ಯ ಸರಕಾರ ಬಿಡುಗಡೆ ಮಾಡಿದೆ.

Advertisement

ಮೂರ್ನಾಲ್ಕು ತಿಂಗಳುಗಳಿಂದ ಅನುದಾನ ಬಿಡುಗಡೆಯಾಗದೆ ಮುಖ್ಯ ಶಿಕ್ಷಕರು, ಶಿಕ್ಷಕರು ಮತ್ತು ಶಾಲಾಭಿವೃದ್ಧಿ ಸಮಿತಿಗಳಿಗೆ ಆಗುತ್ತಿರುವ ಸಮಸ್ಯೆಯ ಬಗ್ಗೆ ‘ಉದಯವಾಣಿ’ ಅ. 15ರಂದು ವಿಶೇಷ ವರದಿ ಪ್ರಕಟಿಸಿತ್ತು.

ಕೇಂದ್ರ ಸರಕಾರದ ಪಾಲಿನ 135.18 ಕೋಟಿ ರೂ. ಹಾಗೂ ರಾಜ್ಯ ಸರಕಾರದ ಪಾಲಿನ 81 ಕೋಟಿ ರೂ. ಹಣವನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತ ಇಲಾಖೆ ಬಿಡುಗಡೆ ಮಾಡಿದೆ.

ಪ್ರಸಕ್ತ ಸಾಲಿನಲ್ಲಿ ಬಿಸಿಯೂಟ ಯೋಜನೆಗೆ ಕೇಂದ್ರದ ಪಾಲಿನ 570 ಕೋಟಿ ರೂ. ಮತ್ತು ರಾಜ್ಯದ ಪಾಲಿನ 330 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ. ಆದರೆ ಇದು ಸೂಕ್ತ ಸಮಯದಲ್ಲಿ ಬಿಡುಗಡೆ ಆಗದೆ ಶಿಕ್ಷಕರು ತಮ್ಮ ಕಿಸೆಯಿಂದ ಹಣ ಹಾಕಿ ಬಿಸಿಯೂಟ ನಿರ್ವಹಿಸುವ ಸ್ಥಿತಿ ನಿರ್ಮಾಣವಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next