Advertisement

Bitcoin case: ಇನ್‌ಸ್ಪೆಕ್ಟರ್‌ ಪ್ರಶಾಂತ್‌ ಬಾಬು, ಸೈಬರ್‌ ತಜ್ಞನಿಗೆ ಜಾಮೀನು

11:52 PM Feb 23, 2024 | Team Udayavani |

ಬೆಂಗಳೂರು: ಬಿಟ್‌ಕಾಯಿನ್‌ ಅಕ್ರಮ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಇನ್‌ಸ್ಪೆಕ್ಟರ್‌ ಡಿ.ಎಂ.ಪ್ರಶಾಂತ್‌ ಬಾಬು ಹಾಗೂ ಸೈಬರ್‌ ತಜ್ಞ ಕೆ.ಎಸ್‌.ಸಂತೋಷ್‌ ಕುಮಾರ್‌ಗೆ ಸೆಷನ್ಸ್‌ ಕೋರ್ಟ್‌ ಜಾಮೀನು ಮಂಜೂರು ಮಾಡಿದೆ.

Advertisement

ಪ್ರಕರಣದಲ್ಲಿ ಸಾಕ್ಷ್ಯ ನಾಶ ಹಾಗೂ ಅಕ್ರಮವಾಗಿ ಬಿಟ್‌ಕಾಯಿನ್‌ ವರ್ಗಾಯಿಸಿಕೊಂಡಿದ್ದಾರೆ ಎಂಬ ಆರೋಪಡಿ ಸಿಐಡಿ ಸೈಬರ್‌ ಕ್ರೈಂ ಪೊಲೀಸರು ಸೈಬರ್‌ ತಜ್ಞ ಸಂತೋಷ್‌ ಕುಮಾರ್‌, ಇನ್‌ಸ್ಪೆಕ್ಟರ್‌ ಪ್ರಶಾಂತ್‌ ಬಾಬು ಹಾಗೂ ಇತರ ಮೂವರು ತನಿಖಾಧಿಕಾರಿಗಳ ವಿರುದ್ಧ ಸಿಐಡಿ ಸೈಬರ್‌ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಜ.25ರಂದು ಇಬ್ಬರನ್ನು ಬಂಧಿಸಿ, ಆರು ದಿನ ಪೊಲೀಸ್‌ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next