Advertisement

ಬಿಟ್‌ ಕಾಯಿನ್‌ ಪ್ರಕರಣ ಮರುತನಿಖೆ: ಪರಮೇಶ್ವರ

01:26 AM Jun 15, 2023 | Team Udayavani |

ಬೆಂಗಳೂರು: ರಾಜ್ಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದ ಬಿಟ್‌ ಕಾಯಿನ್‌ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಲು ಕಾಂಗ್ರೆಸ್‌ ಸರಕಾರ ನಿರ್ಧರಿಸಿದೆ.

Advertisement

ಗೃಹ ಸಚಿವ ಡಾ| ಜಿ. ಪರಮೇಶ್ವರ ಅವರು ಈ ಬಗ್ಗೆ ಅಧಿಕೃತ ಹೇಳಿಕೆ ನೀಡುವ ಮೂಲಕ ಮರೆತು ಹೋಗಿದ್ದ ಪ್ರಕರಣಕ್ಕೆ ಮರುಜೀವ ನೀಡುವ ಸೂಚನೆ ನೀಡಿದ್ದಾರೆ. ನಮ್ಮ ಸರಕಾರದ ಅವಧಿಯಲ್ಲಿ ಬಿಟ್‌ ಕಾಯಿನ್‌ ಸಹಿತ ಅನೇಕ ಹಗರಣ ನಡೆಯಿತು ಎಂದು ಆರೋಪಿಸಿದ್ದ ಕಾಂಗ್ರೆಸ್‌ ಈಗ ಸುಮ್ಮನಾಗಿರುವುದೇಕೆ ಎಂದು ಸಂಸದ ಪ್ರತಾಪ್‌ಸಿಂಹ ಪ್ರಶ್ನಿಸಿದ ಬೆನ್ನಲ್ಲೇ ಗೃಹ ಇಲಾಖೆ ಈ ನಿಲುವು ತೆಗೆದುಕೊಂಡಿದೆ.

ಸುದ್ದಿಗಾರರ ಪ್ರಶ್ನೆಗೆ ಬೆಂಗಳೂರಿನಲ್ಲಿ ಉತ್ತರಿಸಿದ ಪರಮೇಶ್ವರ, ನಾವು ಈ ಪ್ರಕರಣವನ್ನು ಮರು ತನಿಖೆ ನಡೆಸುವ ಬಗ್ಗೆ ಪರಿಶೀಲಿಸುತ್ತೇವೆ. ನಮ್ಮ ಸರಕಾರ ಅಧಿಕಾರಕ್ಕೆ ಬಂದು 20 ದಿನಗಳು ಮಾತ್ರವಾಗಿದೆ. ಬಿಜೆಪಿಯವರು ಈಗಲೇ ಕುಣಿದಾಡುವುದು ಬೇಡ. ಅವರು ಸ್ವಲ್ಪ ಸಮಾಧಾನವಾಗಿದ್ದರೆ ಒಳ್ಳೆಯದು ಎಂದು ತಿರುಗೇಟು ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next