Advertisement

ಬಿಟ್‌ ಕಾಯಿನ್‌ ದಂಧೆ ವಿಚಾರ; ಪಾರದರ್ಶಕ ತನಿಖೆ ಸಿದ್ಧ: ಡಾ|ಅಶ್ವತ್ಥ ನಾರಾಯಣ

02:24 AM Oct 30, 2021 | Team Udayavani |

ಮಂಗಳೂರು: ಬಿಟ್‌ ಕಾಯಿನ್‌ ದಂಧೆ ವಿಚಾರದಲ್ಲಿ ಯಾವುದೇ ರೀತಿಯ ತನಿಖೆ ನಡೆಸಲು ಸಿದ್ಧರಿದ್ದೇವೆ. ಈ ವಿಚಾರವನ್ನು ಕೇಂದ್ರ ತನಿಖಾ ಸಂಸ್ಥೆಗಳಿಗೆ ರೆಫರ್‌ ಮಾಡಿರುವುದಾಗಿ ಮುಖ್ಯಮಂತ್ರಿಗಳು ಈಗಾಗಲೇ ಸ್ಪಷ್ಟವಾಗಿ ಹೇಳಿದ್ದಾರೆ. ಹೀಗಿರುವಾಗ ಯಾವುದೇ ಅನುಮಾನಕ್ಕೆ ಆಸ್ಪದ ಇಲ್ಲದೆ ಪಾರದರ್ಶಕ ತನಿಖೆಗೆ ಸರಕಾರ ಸಿದ್ಧ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ಹೇಳಿದರು.

Advertisement

ಮಂಗಳೂರಿನಲ್ಲಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಬಿಟ್‌ ಕಾಯಿನ್‌ ದಂಧೆ ವಿಚಾರಕ್ಕೆ ಸಂಬಂಧಿಸಿದಂತೆ ನಮ್ಮ ಸರಕಾರ ಸ್ಪಷ್ಟವಾದ ನಿಲುವು ತೆಗೆದುಕೊಂಡಿದೆ. ಆದರೆ ಬಿಜೆಪಿ ನಾಯಕರು ಇದರಲ್ಲಿದ್ದಾರೆ ಎಂದು ಆರೋಪಿಸುವ ಮೂಲಕ ವಿಪಕ್ಷಗಳು ಗೊಂದಲ ಸೃಷ್ಟಿಸುತ್ತಿದೆ ಎಂದರು.

ಇದನ್ನೂ ಓದಿ:ಬೈಕ್‌ ಢಿಕ್ಕಿ: ಉದ್ಯಮಿ ಪ್ರಭಾಕರ ಕಾಮತ್‌ಗೆ ಗಾಯ

ಐಟಿ ಇಲಾಖೆಗೆ ಪಕ್ಷ ಭೇದವಿಲ್ಲ
ಡಿ.ಕೆ. ಶಿವಕುಮಾರ್‌ ಆಪ್ತನ ಮನೆ ಹಾಗೂ ಕಚೇರಿ ಮೇಲೆ ಗುರುವಾರ ನಡೆದ ಐಟಿ ದಾಳಿ ರಾಜಕೀಯ ಪ್ರೇರಿತ ಎಂಬ ಕಾಂಗ್ರೆಸ್‌ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಐಟಿ ಇಲಾಖೆಗೆ ಆ ಪಕ್ಷ, ಈ ಪಕ್ಷ ಎಂಬುದಿಲ್ಲ. ಯಾರು ಸರಕಾರಕ್ಕೆ ತೆರಿಗೆ ಪಾವತಿಸದೆ ವಂಚಿಸುತ್ತಾರೋ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತದೆ ಎಂದರು.

 

Advertisement
Advertisement

Udayavani is now on Telegram. Click here to join our channel and stay updated with the latest news.

Next