Advertisement

BJP; ಒಂದೆರಡು ದಿನಗಳಲ್ಲಿ 20 ಕ್ಷೇತ್ರಗಳ ಅಭ್ಯರ್ಥಿ ಘೋಷಣೆ, ನನ್ನ ಹೆಸರೂ ಇದೆ: ಶ್ರೀ ರಾಮುಲು

05:04 PM Mar 11, 2024 | Team Udayavani |

ರಾಯಚೂರು: ರಾಜ್ಯದ 20 ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಒಂದೆರಡು ದಿನಗಳಲ್ಲಿ ನಾಯಕರು ಅಂತಿಮಗೊಳಿಸುವರು ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ತಿಳಿಸಿದರು.

Advertisement

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಅಭ್ಯರ್ಥಿಗಳ ಆಯ್ಕೆ ಕುರಿತು ಜರಗುತ್ತಿರುವ ಸಭೆಗಳ ನಂತರ ರಾಜ್ಯದ 20 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಬಹಿರಂಗಪಡಿಸುವ ನಿರೀಕ್ಷೆಯಿದೆ. ಈಗಾಗಲೇ ರಾಜ್ಯ ನಾಯಕರು ಎಲ್ಲ ಅಭ್ಯರ್ಥಿಗಳ ಮಾಹಿತಿ ತಗೆದುಕೊಂಡು ಹೋಗಿ ಕೇಂದ್ರದ ನಾಯಕರ ಜತೆ ಚರ್ಚಿಸಿದ್ದಾರೆ. ಹೈಕಮಾಂಡ್ ವಿವಿಧ ರೀತಿಯ ಮಾಹಿತಿಯನ್ನು ತುಲನೆ ಮಾಡಿ ಮಂಗಳವಾರ ಸಂಜೆ ಅಥವ ಬುಧವಾರ ಅಂತಿಮಗೊಳಿಸಲಿದೆ ಎಂದರು.

ರಾಯಚೂರು, ಬಳ್ಳಾರಿ ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರಗಳಿಂದ ತಲಾ ಮೂರು ಹೆಸರು ಕಳಿಸಲಾಗಿದೆ. ಅದರಲ್ಲಿ ನನ್ನ ಹೆಸರೂ ಇದೆ. ನಾನು ಮತ್ತು ಜನಾರ್ದನ ರೆಡ್ಡಿ ಹಿಂದೆ, ಇಂದು ಹಾಗೂ ಮುಂದೆಯೂ ಸ್ನೇಹಿತರೇ. ಪಕ್ಷ ಮತ್ತು ರಾಜಕೀಯವನ್ನು ಸ್ನೇಹದಲ್ಲಿ ತಳಕು ಹಾಕುವುದು ಸರಿಯಲ್ಲ. ಒಂದು ವೇಳೆ ರಾಮುಲು ಅವರಿಗೆ ಟಿಕೆಟ್ ನೀಡಿದರೆ ಅವರು ಸೋಲುತ್ತಾರೆ ಎಂದು ಯಾವ ದೃಷ್ಟಿಕೋನದಿಂದ ಹೇಳಿದ್ದರೋ ಗೊತ್ತಿಲ್ಲ‌‌‌. ಏನೇ ಇದ್ದರೂ ಪಕ್ಷದ ತೀರ್ಮಾನ ಅಂತಿಮ ಎಂದರು.

ಡಾ.ಅಂಬೇಡ್ಕರ್ ರಚಿಸಿದ ಸಂವಿಧಾನದಡಿಯೇ ಬಿಜೆಪಿ ಸರ್ಕಾರ ಆಡಳಿತ ಮಾಡುತ್ತಿದೆ. ಯಾವುದೇ ಕಾರಣಕ್ಕೂ ಬಿಜೆಪಿ ಸಂವಿಧಾನ ತಿದ್ದುಪಡಿಗೆ ಮುಂದಾಗುವುದಿಲ್ಲ. ಸಂಸದ ಅನಂತಕುಮಾರ ಹೇಳಿಕೆ ಅವರ ವೈಯಕ್ತಿಕ ಎಂದು ಈಗಾಗಲೇ ಬಿಜೆಪಿ ಸ್ಪಷ್ಟಪಡಿಸಿದೆ. ಅವರ ವೈಯಕ್ತಿಕ ಹೇಳಿಕೆಗಳಿಂದ ಪಕ್ಷಕ್ಕೆ ಯಾವುದೇ ರೀತಿಯ ಹಾನಿ ಆಗುವುದಿಲ್ಲ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next