Advertisement

ಬಿಜೆಪಿ 20 ಶಾಸಕರು ಶೀಘ್ರ ಕಾಂಗ್ರೆಸ್‌ ಸೇರ್ಪಡೆ: ವೇಣು

11:20 PM May 13, 2019 | Team Udayavani |

ಚಿಂಚೋಳಿ: “ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ರಚನೆ ಆದಾಗಿನಿಂದಲೂ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ಬಿಜೆಪಿ ಬಹಳಷ್ಟು ತೊಂದರೆ ನೀಡುತ್ತಿದೆ. ಆದರೆ ಬಿಜೆಪಿ ಏನೇ ಮಾಡಿದರೂ ಅಧಿ ಕಾರಕ್ಕೆ ಬರಲು ಸಾಧ್ಯವಿಲ್ಲ.

Advertisement

ಮೇ 23ರ ನಂತರ 20 ಶಾಸಕರು ಬಿಜೆಪಿ ಬಿಟ್ಟು ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆ ಆಗಲಿದ್ದಾರೆ’ ಎಂದು ಎಐಸಿಸಿ ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ ಹೇಳಿದರು. ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ.

ಐದು ವರ್ಷದ ಅ ಧಿಕಾರ ಪೂರ್ಣಗೊಳಿಸಲಿದೆ. ಕುಂದಗೋಳ ಮತ್ತು ಚಿಂಚೋಳಿ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಲಿದ್ದಾರೆ. ಕುಂದಗೋಳದಲ್ಲಿ ಶಿವಳ್ಳಿ ಅವರ ಅಕಾಲಿಕ ನಿಧನದಿಂದ ಉಪ ಚುನಾವಣೆ ನಡೆಯುತ್ತಿದೆ.

ಆದರೆ ಚಿಂಚೋಳಿಯಲ್ಲಿ ಜಾಧವ ಪಕ್ಷಾಂತರ ಮಾಡಿದ್ದರಿಂದ ಚುನಾವಣೆ ಎದುರಾಗಿದೆ. ಕಾಂಗ್ರೆಸ್‌ನಿಂದ ಎಲ್ಲವನ್ನೂ ಪಡೆದು ಈಗ ಬಿಜೆಪಿಗೆ ಹೋಗಿರುವ ವ್ಯಕ್ತಿಗೆ ತಕ್ಕ ಪಾಠ ಕಲಿಸಿ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next