Advertisement
ಸೆ.1ರಂದು ಜಿಪಂ ಭವನದಲ್ಲಿ ನಡೆದ ಪೋಸ್ಟಲ್ ಪೇಮಂಟ್ಸ್ ಬ್ಯಾಂಕ್ನ ರಾಮನಗರ ಶಾಖೆಯನ್ನು ಉದ್ಘಾಟಿಸಿದ ನಂತರ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮುಖಾಂತರ ದೇಶವನ್ನು ಉದ್ದೇಶಿಸಿ ಮಾತನಾಡುವ ಸಮಯಕ್ಕೆ ಸರಿಯಾಗಿ ಸಿಇಒ ಮತ್ತು ಎಸ್ಪಿ ಸಭೆಯಿಂದ ಹೊರನಡೆದರು. ಉದ್ಘಾಟನೆಗೆ ಸಂಸದ ಡಿ.ಕೆ.ಸುರೇಶ್ ಮತ್ತು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಗೈರಾಗಿದ್ದರು.
ಇಂತಹ ಅಧಿಕಾರಿಯಿಂದ ಸರ್ಕಾರದ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನಗೊಳ್ಳುವುದು ಅನುಮಾನ ಎಂದು ಆಕ್ರೋಶ ವ್ಯಕ್ತಪಡಿಸಿದರು.
Related Articles
Advertisement
ಕೇಂದ್ರದ ಯೋಜನೆಗಳು ಜಾರಿ ಆಗ್ತಿಲ್ಲ: ಬಿಜೆಪಿ ಮುಖಂಡ ಜಿ.ವಿ.ಪದ್ಮನಾಭ ಮಾತನಾಡಿ, ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದ ಯೋಜನೆಗಳು ಪೂರ್ಣ ಪ್ರಮಾಣದಲ್ಲಿ ಅನುಷ್ಠಾನವಾಗುತ್ತಿಲ್ಲ ಎಂದು ದೂರಿದರು. ಜಿಲ್ಲಾಡಳಿತ ಮತ್ತು ಜಿಪಂ ಅಧಿಕಾರಿಗಳು ಈ ಬಗ್ಗೆ ಕಾಳಜಿವಹಿಸುತ್ತಿಲ್ಲ ಎಂದು ಆರೋಪಿಸಿದರು.
ಹಿರಿಯ ಬಿಜೆಪಿ ಮುಖಂಡ ಎಸ್.ನಾಗರಾಜು ಅಧಿಕಾರಿಗಳ ಧೋರಣೆಯನ್ನು ಖಂಡಿಸಿದರು. ಮುಖಂಡರಾದ ಪ್ರವೀಣ್ ಗೌಡ, ಮಂಜು, ಚಂದ್ರಶೇಖರ ರೆಡ್ಡಿ, ಚನ್ನಪ್ಪ, ವಿ.ರಾಜು, ಸಾವಿತ್ರಮ್ಮ, ಚಂದ್ರಪ್ರಭಾ, ಹೇಮಾವತಿ, ಕಾಳಯ್ಯ, ಚಂದ್ರಕಲಾ ಮುಂತಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಪ್ರತಿಭಟನಾಕಾರರು ರಾಜ್ಯಪಾಲರಿಗೆ ಮಾಡಿ ಕೊಂಡ ಮನವಿಯನ್ನು ಅಪರ ಜಿಲ್ಲಾಧಿಕಾರಿ ಡಾ.ಪ್ರಶಾಂತ್ ಸ್ವೀಕರಿಸಿದರು.